ಸಮ್ಮಿಶ್ರ ಅಸಮಾಧಾನ: ರಾಜ್ಯ ನಾಯಕರಿಗೆ ಹೈಕಮಾಂಡ್ ಕೊಟ್ಟ ಸೂಚನೆ ಏನು ಗೊತ್ತಾ?

ಬುಧವಾರ, 27 ಜೂನ್ 2018 (10:45 IST)
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ವೈಖರಿ ಬಗ್ಗೆ ಕಾಂಗ್ರೆಸ್ ನ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಉಂಟಾಗಿರುವ ಅಸಮಾಧಾನದ ಹೊಗೆ ತಣ್ಣಗಾಗಿಸಲು ಹೈಕಮಾಂಡ್ ಮುಂದಾಗಿದೆ.

ಸಮ್ಮಿಶ್ರ ಸರ್ಕಾರದ ಆಯಸ್ಸಿನ ಬಗ್ಗೆ ಸಿದ್ದರಾಮಯ್ಯ ಮಾತನಾಡಿದ್ದಾರೆನ್ನಲಾದ ವಿಡಿಯೋ ಬಹಿರಂಗವಾಗುತ್ತಿದ್ದಂತೆ ರಾಜ್ಯ ನಾಯಕರ ಜತೆ ಉಸ್ತುವಾರಿ ಕೆಸಿ ವೇಣುಗೋಪಾಲ್ ಹೈಕಮಾಂಡ್ ನ ಸೂಚನೆ ರವಾನಿಸಿದ್ದಾರೆ.

ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅಥವಾ ಜೆಡಿಎಸ್ ವಿರುದ್ಧ, ಪರ ಹೇಳಿಕೆಗಳನ್ನು ಮಾಧ್ಯಮಗಳಿಗೆ, ಬಹಿರಂಗವಾಗಿ ನೀಡದಂತೆ ಹೈಕಮಾಂಡ್ ಸೂಚನೆ ನೀಡಿದೆ ಎನ್ನಲಾಗಿದೆ. ಈ ಬಗ್ಗೆ ಕೆಸಿ ವೇಣುಗೋಪಾಲ್ ರಾಜ್ಯ ನಾಯಕರ ಜತೆ ಮಾತುಕತೆ ನಡೆಸಿ ಸಂಯಮದಿರುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ