ಸಮ್ಮಿಶ್ರ ಅಸಮಾಧಾನ: ರಾಜ್ಯ ನಾಯಕರಿಗೆ ಹೈಕಮಾಂಡ್ ಕೊಟ್ಟ ಸೂಚನೆ ಏನು ಗೊತ್ತಾ?
ಸಮ್ಮಿಶ್ರ ಸರ್ಕಾರದ ಆಯಸ್ಸಿನ ಬಗ್ಗೆ ಸಿದ್ದರಾಮಯ್ಯ ಮಾತನಾಡಿದ್ದಾರೆನ್ನಲಾದ ವಿಡಿಯೋ ಬಹಿರಂಗವಾಗುತ್ತಿದ್ದಂತೆ ರಾಜ್ಯ ನಾಯಕರ ಜತೆ ಉಸ್ತುವಾರಿ ಕೆಸಿ ವೇಣುಗೋಪಾಲ್ ಹೈಕಮಾಂಡ್ ನ ಸೂಚನೆ ರವಾನಿಸಿದ್ದಾರೆ.
ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅಥವಾ ಜೆಡಿಎಸ್ ವಿರುದ್ಧ, ಪರ ಹೇಳಿಕೆಗಳನ್ನು ಮಾಧ್ಯಮಗಳಿಗೆ, ಬಹಿರಂಗವಾಗಿ ನೀಡದಂತೆ ಹೈಕಮಾಂಡ್ ಸೂಚನೆ ನೀಡಿದೆ ಎನ್ನಲಾಗಿದೆ. ಈ ಬಗ್ಗೆ ಕೆಸಿ ವೇಣುಗೋಪಾಲ್ ರಾಜ್ಯ ನಾಯಕರ ಜತೆ ಮಾತುಕತೆ ನಡೆಸಿ ಸಂಯಮದಿರುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.