ಕಾಂಗ್ರೆಸ್​ ಸುಳ್ಳು ಸೃಷ್ಟಿಸುವ ಕೆಲಸ ಮಾಡುತ್ತಿದೆ- ಸಿಎಂ

ಭಾನುವಾರ, 30 ಅಕ್ಟೋಬರ್ 2022 (20:30 IST)
ಮುಖ್ಯಮಂತ್ರಿ ಕಚೇರಿಯಿಂದಲೇ ಪತ್ರಕರ್ತರಿಗೆ ನಗದು ರೂಪದಲ್ಲಿ ಲಂಚ ನೀಡಲಾಗಿದೆ ಎಂದು ಕಾಂಗ್ರೆಸ್​ ಪಕ್ಷವು ಮಾಡಿರುವ ಆರೋಪಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಅವರು, ಕಾಂಗ್ರೆಸ್​ ಪಕ್ಷ ಸುಳ್ಳು ಸೃಷ್ಟಿಸುವ ಕೆಲಸ ಮಾಡುತ್ತಿದೆ. ಪತ್ರಕರ್ತರಿಗೆ ಗಿಫ್ಟ್​ ಕೊಡಿ ಎಂದು ನಾನು ಯಾರಿಗೂ ಸೂಚಿಸಿಲ್ಲ. ಇದು ಕಾಂಗ್ರೆಸ್​​ ಟೂಲ್​ ಕಿಟ್​​ನ ಮುಂದುವರಿದ ಭಾಗ. ಕಾಂಗ್ರೆಸ್ ಅವಧಿಯಲ್ಲಿ ಐ ಫೋನ್​, ಚಿನ್ನದ ನಾಣ್ಯ ನೀಡಿದ್ದರು. ಈಗ ಆರೋಪ ಮಾಡಲು ಕಾಂಗ್ರೆಸ್​ಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು. ಪತ್ರಕರ್ತರಿಗೆ ಹಣ ನೀಡಿದ ಆರೋಪ ಹೊರಿಸಿ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಲೋಕಾಯುಕ್ತರ ತನಿಖೆಯಲ್ಲಿ ಸತ್ಯಾಂಶ ಹೊರಬರಲಿದೆ. ಕಾಂಗ್ರೆಸ್​ ಪಕ್ಷದ ಕರ್ನಾಟಕ ಉಸ್ತುವಾರಿ ಸುರ್ಜೇವಾಲ ತುಂಬಾ ಕೆಟ್ಟದಾಗಿ ಮಾತನಾಡಿದ್ದಾರೆ. ಅವರ ಹೇಳಿಕೆಯನ್ನು ನಾನು ಖಂಡಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ