ಆಪರೇಷನ್ ಕಮಲಕ್ಕೆ ಶಾಕ್ ನೀಡಲು ಕಾಂಗ್ರೆಸ್-ಜೆಡಿಎಸ್ ಹೊಸ ತಂತ್ರ

ಗುರುವಾರ, 17 ಜನವರಿ 2019 (10:20 IST)
ಬೆಂಗಳೂರು : ಬಿಜೆಪಿಯ ಆಪರೇಷನ್ ಕಮಲಕ್ಕೆ  ಶಾಕ್ ನೀಡಲು ಕಾಂಗ್ರೆಸ್-ಜೆಡಿಎಸ್ ಹೊಸ ತಂತ್ರವೊಂದನ್ನು ರೂಪಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.


ಬಿಜೆಪಿಯ ಶಾಸಕರನ್ನು ಸೆಳೆಯಲು  ದೋಸ್ತಿ ಸರ್ಕಾರ ಸಿದ್ಧತೆ ನಡೆಸಿದೆ. ಈ ಬಗ್ಗೆ ನಿನ್ನೆ  ನಡೆದ ಜೆಡಿಎಸ್ ಆತಂರಿಕ ಸಭೆಯಲ್ಲಿ ಚರ್ಚೆ ನಡೆಸಿದ್ದು, ಜೆಡಿಎಸ್ ನ ಈ ಪ್ಲಾನ್ ಗೆ ಕಾಂಗ್ರೆಸ್ ನಾಯಕರೂ ಸಾಥ್ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


10 ಕ್ಕೂ ಹೆಚ್ಚು ಬಿಜೆಪಿ ಶಾಸಕರನ್ನು ಸೆಳೆಯಲು ಪ್ಲಾನ್ ಮಾಡಿವೆ. ಆದರೆ ಈಗಲೇ ಶಾಸಕರನ್ನು ತಮ್ಮತ್ತ ಸೆಳೆದರೆ ನಿಭಾಯಿಸುವುದು ಕಷ್ಟ. ಉಪಚುನಾವಣೆ ನಡೆಸುವುದು ಕಷ್ಟವಾಗುತ್ತದೆ. ಹೀಗಾಗಿ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ದೋಸ್ತಿ ಸರ್ಕಾರ ಈ ಪ್ಲಾನ್ ಮಾಡಿದೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ