Waqf Bill: ತಿರುಪತಿಯಲ್ಲೂ ಬೇರೆ ಧರ್ಮದವರನ್ನು ನೇಮಿಸ್ತಾರಾ, ವಕ್ಫ್ ಮಂಡಳಿಯಲ್ಲಿ ಯಾಕೆ: ಬಿಕೆ ಹರಿಪ್ರಸಾದ್
ಇದೀಗ ಇಂದು ಮಾಧ್ಯಮಗಳ ಮುಂದೆ ಮಾತನಾಡಿರುವ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್, ಹಾಗಿದ್ದರೆ ಕೇಂದ್ರ ಸರ್ಕಾರ ತಿರುಪತಿಯಲ್ಲೂ ಅನ್ಯಧರ್ಮೀಯದ ಅಧಿಕಾರಿಗಳನ್ನು ನೇಮಕ ಮಾಡ್ತಾರಾ? ವಕ್ಫ್ ಮಂಡಳಿ ಎನ್ನುವುದು ಮುಸ್ಲಿಮರ ವೈಯಕ್ತಿಕ ಮಂಡಳಿ. ಅಲ್ಲಿ ಅವರ ಧರ್ಮದ ಆಚರಣೆಗೆ ಅವಕಾಶ ಕೊಡಬೇಕು. ಅಲ್ಲಿ ಅನ್ಯ ಧರ್ಮೀಯರಿಗೆ ಅವಕಾಶ ನೀಡಬಾರದು. ಇದು ಅವರ ಧಾರ್ಮಿಕ ಸ್ವಾತಂತ್ರ್ಯಕ್ಕೆ ಅಡ್ಡಿ ಮಾಡಿದಂತೆ ಎಂದಿದ್ದಾರೆ.
ದೇಶದಲ್ಲಿ ಅನೇಕ ಗಂಭೀರ ಸಮಸ್ಯೆಗಳಿವೆ. ಅದನ್ನು ಪರಿಹರಿಸುವ ಬದಲು ಜನರ ಗಮನ ಬೇರೆ ಕಡೆ ಸೆಳೆಯಲು ವಕ್ಫ್ ತಿದ್ದುಪಡಿಗೆ ಕೇಂದ್ರ ಕೈ ಹಾಕಿದೆ. ಈಗಾಗಲೇ ಮನಮೋಹನ್ ಸಿಂಗ್ ಸರ್ಕಾರವಿದ್ದಾಗಲೇ ವಕ್ಫ್ ಬಿಲ್ ಗೆ ತಿದ್ದುಪಡಿ ತಂದು ಸಾಕಷ್ಟು ಸರಳೀಕರಣಗೊಳಿಸಿದ್ದಾರೆ. ಈಗ ಮೋದಿ ಸರ್ಕಾರ ಇಂತಹದ್ದೊಂದು ಬಿಲ್ ತರುವ ಅಗತ್ಯವೇ ಇರಲಿಲ್ಲ ಎಂದಿದ್ದಾರೆ.