ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದ ಬಿಎಸ್ವೈ, ಕೆಜೆಪಿ ಸ್ಥಾಪನೆ ಬಳಿಕ ಬಿಜೆಪಿ ಮುಗಿಸುವುದೇ ನನ್ನ ಗುರಿ ಎಂದು ಹೇಳಿದ್ದರು. ಆದರೆ, ಇದೀಗ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವುದೇ ನನ್ನ ಗುರಿ ಎನ್ನುತ್ತಿದ್ದಾರೆ ಎಂದರು.
ಬಿಜೆಪಿ ಅಧಿಕಾರಕ್ಕೆ ಬಂದರೆ, ರಾಜ್ಯದ ಜನತೆಗೆ ಏನು ಬೇಕಾದ್ರೂ ಕೋಡುತ್ತೇವೆ ಎಂದು ನಿನ್ನೆ ನಡೆದ ಸಮಾವೇಶದಲ್ಲಿ ಬಿಎಸ್ವೈ ಭರವಸೆ ನೀಡಿದ್ದರು. ಆದರೆ, ಸಮಾವೇಶಕ್ಕೆ ಆಗಮಿಸಿದ್ದ ಜನರಿಗೆ ಊಟವೇ ನೀಡಿಲ್ಲ ಎಂದು ವ್ಯಂಗ್ಯವಾಡಿದರು.