ಯಡಿಯೂರಪ್ಪರನ್ನು ಟೀಕಿಸಲು ಕಾಂಗ್ರೆಸ್‌ನವರಿಗೆ ಗಟ್ಟಿ ಗುಂಡಿಗೆ ಬೇಕು

ಮಂಗಳವಾರ, 28 ಮಾರ್ಚ್ 2017 (19:18 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪರನ್ನು ಟೀಕಿಸಲು ಕಾಂಗ್ರೆಸ್‌ನವರಿಗೆ ಗಟ್ಟಿ ಗುಂಡಿಗೆ ಬೇಕು ಎಂದು ಬಿಜೆಪಿ ಮುಖಂಡ ಸಂಸದ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ.
 
ಗುಂಡ್ಲುಪೇಟೆ, ನಂಜನಗೂಡು ವಿಧಾನಸಭಾ ಉಪಚುನಾವಣೆ ಕಣಕ್ಕೆ ಅತಿರಥ, ಮಹಾರಥರು ಧುಮಕಿದ್ದು ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಭಾರಿ ಪ್ರಚಾರದಲ್ಲಿ ತೊಡಗಿದ್ದಾರೆ. ಅತ್ಯಧಿಕ ಮತಗಳ ಅಂತರದಿಂದ ಬಿಜೆಪಿ ಗೆಲುವು ಖಚಿತ ಎಂದರು.
 
ಬಿಜೆಪಿ ಸರಕಾರವಿದ್ದಾಗ ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದಂತೆ ನಡೆದಿದ್ದಾರೆ. ಜನಪರ ಕಾರ್ಯಗಳಿಂದಾಗಿ ಜನತೆಯ ಮನಗೆದ್ದಿದ್ದಾರೆ. ಕಾಂಗ್ರೆಸ್‌ನವರಂತೆ ಸುಳ್ಳು ಭರವಸೆಗಳನ್ನು ನೀಡಿ ಸರಕಾರ ನಡೆಸಿಲ್ಲ ಎಂದು ತಿರುಗೇಟು ನೀಡಿದ್ದಾರೆ.
 
ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಗೆದ್ದಂತೆ, ಗುಂಡ್ಲುಪೇಟೆ ಮತ್ತು ನಂಜನಗೂಡು ಕ್ಷೇತ್ರದಲ್ಲಿ ಚುನಾವಣೆ ಗೆಲ್ಲಲು ಕಾಂಗ್ರೆಸ್ ಪಕ್ಷಕ್ಕೆ ಸಾಧ್ಯವಿಲ್ಲ. ಉಪಚುನಾವಣೆಯಲ್ಲಿ ಬಿಜೆಪಿ ಎರಡೂ ಕ್ಷೇತ್ರಗಳಲ್ಲಿ ಜಯಬೇರಿ ಬಾರಿಸುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ