ದೇಶಾದ್ಯಂತ 500, 1000 ಮುಖಬೆಲೆಯ ನೋಟುಗಳ ನಿಷೇಧಿಸಿರುವ ಕ್ರಮವನ್ನು ಕಾಂಗ್ರೆಸ್ ನಾಯಕರು ಪ್ರಬಲವಾಗಿ ವಿರೋಧಿಸುತ್ತಿರುವುದು ಎಲ್ಲರಿಗೂ ತಿಳಿದಿರುವುದೇ. ಆದರೆ, ಕಾಂಗ್ರೆಸ್ ಹಿರಿಯ ನಾಯಕ, ಆರೋಗ್ಯ ಸಚಿವ ರಮೇಶ್ ಕುಮಾರ್, ಪ್ರಧಾನಿ ಮೋದಿ ನಡೆಯನ್ನು ಸಮರ್ಥಿಸಿಕೊಳ್ಳುವ ಮೂಲಕ ತಮ್ಮ ಪಕ್ಷದ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ದೇಶಾದ್ಯಂತ ಏಕಾಏಕಿ 500, 1000 ಮುಖಬೆಲೆಯ ನೋಟ್ ಬ್ಯಾನ್ ಮಾಡಿರುವುದರಿಂದ ಜನಸಾಮಾನ್ಯರು ತೊಂದರೆ ಅನುಭವಿಸಿದ್ದಾರೆಯೋ, ಅದೇ ರೀತಿಯ ಕಷ್ಟ ನನಗೂ ಆಗಿದೆ. ನೋಟ್ ಬ್ಯಾನ್ನಿಂದ ಸಮಸ್ಯೆ ಆಗಿರುವುದು ನಿಜ. ಆದರೆ, 50 ದಿನಗಳಲ್ಲಿ ಎಲ್ಲವನ್ನೂ ಸರಿ ಮಾಡುವುದು ಕಷ್ಟ. ಸ್ಪಲ್ಪ ದಿನ ಕಾಯೋಣ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ತಿಳಿಸಿದರು.