ಸಿಎಂ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಭೇಟಿ ಮಾಡಿದ ಜಮೀರ್

ಬುಧವಾರ, 14 ಸೆಪ್ಟಂಬರ್ 2022 (20:12 IST)
ಸಿಎಂ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪರವನ್ನ ಜಮೀರ್ ಅಹ್ಮದ್  ಭೇಟಿ ಮಾಡಿದಾರೆ.ವಿಧಾನಸಭಾ ಕಲಾಪಕ್ಕೆ ತೆರಳುವ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದ್ದು,ಚಾಮರಾಜಪೇಟೆ ಕ್ಷೇತ್ರದ ಅಭಿವೃದ್ಧಿ, ಸಮಸ್ಯೆಗಳ ಕುರಿತು ಚರ್ಚಿಸಿ ಮನವಿ ಸಲ್ಲಿಸಿದಾರೆ.
 
ಚಾಮರಾಜಪೇಟೆಯ ಹಲವು ವಿಷಯಗಳ ಕುರಿತು ಚರ್ಚೆ ಮಾಡಿದ್ದೇನೆಂದು ಜಮೀರ್ ಅಹ್ಮದ್  ತಿಳಿಸಿದಾರೆ.ಬಿಜೆಪಿಯ ಇಬ್ಬರು ನಾಯಕರನ್ನು ಜಮೀರ್ ಅಹ್ಮದ್ ಭೇಟಿ ಮಾಡಿರುವುದು ಇದೀಗ ಕುತೂಹಲ ಮೂಡಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ