Bantwal murder; ಅಬ್ದುಲ್ ರಹಿಮಾನ್ ಹತ್ಯೆ ಖಂಡಿಸಿ ಒಗ್ಗಟ್ಟು ಪ್ರದರ್ಶಿಸಿದ ಕಾಂಗ್ರೆಸ್ ನ ಮುಸ್ಲಿಂ ಮುಖಂಡರು
ಬಂಟ್ವಾಳದಲ್ಲಿ ಮೊನ್ನೆ ದುಷ್ಕರ್ಮಿಗಳು ಅಬ್ದುಲ್ ರಹಿಮಾನ್ ಎನ್ನುವ ಯುವಕನನ್ನು ಕೊಚ್ಚಿ ಕೊಲೆ ಮಾಡಿದ್ದರು. ಈ ಭೀಕರ ಹತ್ಯೆಯಿಂದ ಮುಸ್ಲಿಂ ಸಮುದಾಯ ರೊಚ್ಚಿಗೆದ್ದಿದೆ. ಮುಸ್ಲಿಮರಿಗೆ ರಕ್ಷಣೆ ನೀಡಲು ವಿಫಲವಾದ ಕಾಂಗ್ರೆಸ್ ವಿರುದ್ಧ ಮುಸ್ಲಿಮ್ ನಾಯಕರು ಸಿಡಿದೆದ್ದಿದ್ದಾರೆ.
ಇಂದು ಕಾಂಗ್ರೆಸ್ ಧೋರಣೆ ಖಂಡಿಸಿ ಕಾಂಗ್ರೆಸ್ ನ ಎಲ್ಲಾ ಮುಸ್ಲಿಂ ಮುಖಂಡರು ಇಂದು ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಹೇಳಿದ್ದಾರೆ. ನಮಗೆ ಪಕ್ಷಕ್ಕಿಂತ ನಮ್ಮ ಧರ್ಮದೊಡ್ಡದು ಎಂದಿದ್ದಾರೆ.
ಪ್ರಸ್ತುತ ನಡೆದಿರುವ ಕೊಲೆಯಿಂದ ಮುಸ್ಲಿಂ ಸಮುದಾಯಕ್ಕೆ ನೋವಾಗಿದೆ. ಕಾಂಗ್ರೆಸ್ ಸರ್ಕಾರ ನಮ್ಮ ಸಮುದಾಯಕ್ಕೆ ರಕ್ಷಣೆ ನೀಡಲು ವಿಫಲವಾಗಿದೆ. ಈ ಕಾರಣಕ್ಕೆ ಪಕ್ಷದ ಧೋರಣೆ ಖಂಡಿಸಿ ರಾಜೀನಾಮೆ ನೀಡುತ್ತಿರುವಾಗಿ ಅವರು ಹೇಳಿದ್ದಾರೆ.