ಬಾಯಿತಪ್ಪಿ ಕಾಂಗ್ರೆಸ್ 150 ಸೀಟು ಗೆಲ್ಲಬೇಕು ಎಂದ ಮುರಳಿಧರ್ ರಾವ್

ಶನಿವಾರ, 6 ಮೇ 2017 (13:36 IST)
ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿಯ ಬದಲಿಗೆ ಕಾಂಗ್ರೆಸ್ 150 ಸೀಟ್ ಗೆಲ್ಲಬೇಕು ಎಂದು ರಾಜ್ಯ ಉಸ್ತುವಾರಿ ಮುರಳಿಧರ್ ರಾವ್ ಹೇಳಿದಾಗ ಬಿಜೆಪಿ ಮುಖಂಡರು ಗಲಿಬಿಲಿಗೊಳಗಾದರು.
 
ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯ ಭಾಷಣದಲ್ಲಿ ಬಿಜೆಪಿ ಬದಲಿಗೆ ಕಾಂಗ್ರೆಸ್ 150 ಸೀಟುಗಳನ್ನು ಗೆಲ್ಲಬೇಕು ಎಂದು ಹೇಳಿದಾಗ ಕಾರ್ಯಕರ್ತರು ಮತ್ತು ನಾಯಕರಲ್ಲಿ ಗೊಂದಲ ಏರ್ಪಟ್ಟಿತು. ನಂತರ ತಮ್ಮ ತಪ್ಪು ಸುಧಾರಿಸಿಕೊಂಡು ಬಿಜೆಪಿ 150 ಸ್ಥಾನಗಳಲ್ಲಿ ಜಯಗಳಿಸಬೇಕು ಎಂದರು.
 
ದೇಶಾದ್ಯಂತ ಜನತೆ ಬಿಜೆಪಿ ಪರ ಒಲವು ತೋರಿಸಿದ್ದಾರೆ.ಪ್ರಧಾನಿ ಮೋದಿಯವರ ಪಾರದರ್ಶಕ ಅಡಳಿತದಿಂದ ಜನತೆ 17 ರಾಜ್ಯಗಳಲ್ಲಿ ಬಿಜೆಪಿ ಪಕ್ಷಕ್ಕೆ ಅಧಿಕಾರ ನೀಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
 
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಎಲ್ಲರು ಒಗ್ಗಟ್ಟಿನಿಂದ ಶ್ರಮಿಸಿದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ ಎಂದು ರಾಜ್ಯ ಉಸ್ತುವಾರಿ ಮುರಳಿಧರ್ ರಾವ್ ಭವಿಷ್ಯ ನುಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ