ಕಾಂಗ್ರೆಸ್ ಪಾಧಯಾತ್ರೆ ಜನರಿಗೆ ಕಷ್ಟ

ಮಂಗಳವಾರ, 1 ಮಾರ್ಚ್ 2022 (16:19 IST)
ಕಾಂಗ್ರೆಸ್ ತನ್ನ ರಾಜಕೀಯ ಹಿತಾಸಕ್ತಿಗೆ ಇಡೀ ಬೆಂಗಳೂರು ಜನರನ್ನು ಸಂಕಷ್ಟಕ್ಕೆ ಈಡು ಮಾಡುತ್ತಿದ್ದಾರೆ. ಇವರ ಪಾದಯಾತ್ರೆಯಿಂದ ಬೆಂಗಳೂರಿಗೆ ಏನೂ ಅನುಕೂಲವಾಗುವುದಿಲ್ಲ. ಬದಲಿಗೆ ಸಂಕಷ್ಟವೇ ಹೆಚ್ಚು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
 
ಮೇಕೆದಾಟು ಯೋಜನೆಗೆ ಕುರಿತು ಸರ್ಕಾರವನ್ನು ಒತ್ತಾಯಿಸಲು ಕಾಂಗ್ರೆಸ್ ಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
 
ಬೆಂಗಳೂರು ಜನರಿಗೆ ಸಂಕಷ್ಟ
 
ಕಾಂಗ್ರೆಸ್ ಸ್ವಾತಂತ್ರ್ಯ ಉದ್ಯಾನವನ ದಲ್ಲಿ ಪ್ರತಿಭಟನೆ, ಭಾಷಣ ಮಾಡಿ ತೆರಳಬಹುದಿತ್ತು. ಬೆಂಗಳೂರಿನಲ್ಲಿ ಮೂರು ದಿನ ಎಲ್ಲಾ ದಿಕ್ಕಿನಲ್ಲಿ ಪಾದಯಾತ್ರೆ ಮಾಡುವ ಮೂಲಕ ಸಂಚಾರ ದಟ್ಟಣೆ ಉಂಟುಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಯಾವುದೋ ಒಂದು ಕಡೆ ಸಂಚಾರ ದಟ್ಟಣೆಯಾದರೆ ಅದರ ಪರಿಣಾಮ ಎಲ್ಲಾ ಕಡೆ ಆಗುತ್ತದೆ. ಇದರ ಅರಿವಿದೆ ಅವರಿಗೆ. ಆದರೂ ತಮ್ಮ ರಾಜಕೀಯ ಹಿತಾಸಕ್ತಿಗೆ ಇಡೀ ಬೆಂಗಳೂರು ಜನರನ್ನು ಸಂಕಷ್ಟಕ್ಕೆ ಈಡು ಮಾಡುತ್ತಿದ್ದಾರೆ. ಇವರ ಪಾದಯಾತ್ರೆಯಿಂದ ಬೆಂಗಳೂರಿಗೆ ಏನೂ ಅನುಕೂಲವಾಗುವುದಿಲ್ಲ. ಬದಲಿಗೆ ಸಂಕಷ್ಟವೇ ಹೆಚ್ಚು ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ