ಸಿದ್ದರಾಮಯ್ಯರಿಂದಲೇ ಕಾಂಗ್ರೆಸ್ ಪಕ್ಷ ನಿರ್ನಾಮವಾಗುತ್ತೆ- ಬಿ.ಸಿ.ಪಾಟೀಲ್ ಆಕ್ರೋಶ

ಗುರುವಾರ, 28 ನವೆಂಬರ್ 2019 (11:14 IST)
ಬೆಂಗಳೂರು : ತಮ್ಮ ವಿರುದ್ಧ ಮಾತನಾಡಿದ ವಿಪಕ್ಷ ನಾಯಕ  ಸಿದ್ದರಾಮಯ್ಯ ಅವರ ಮೇಲೆ ಹಿರೇಕೆರೂರು ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.



ನಿಮ್ಮ ಎಲುಬಿಲ್ಲದ ನಾಲಿಗೆಯಲ್ಲಿ ಏನೇನೋ ಮಾತಾಡಬೇಡಿ. ವಿಪಕ್ಷ ನಾಯಕ ಸಿದ್ದರಾಮಯ್ಯ ಆಟ ಕಾಂಗ್ರೆಸ್ ಗೆ ಗೂಟ. ಸಿದ್ದರಾಮಯ್ಯ ನನ್ನು ನಂಬಿಕೊಂಡವರು ಕೆಟ್ಟರು. ಕರ್ನಾಟಕದಲ್ಲಿ ಕಾಂಗ್ರೆಸ್ ಹಾಳು ಮಾಡಿದ್ದು ಸಿದ್ದರಾಮಯ್ಯ.


ಸಿದ್ದರಾಮಯ್ಯರಿಂದಲ್ಲೇ ಕಾಂಗ್ರೆಸ್ ಪಕ್ಷ ನಿರ್ನಾಮವಾಗುತ್ತೆ ಎಂದು ಬಿ.ಸಿ.ಪಾಟೀಲ್ ಸಿದ್ದರಾಮಯ್ಯ ವಿರುದ್ಧ ಕಿಡಿಕಾರದ್ದಾರೆ.
2018ರಲ್ಲಿ ನಾನು ಗೆದ್ದ ಬಳಿಕ ನನ್ನ ಬೆನ್ನಿಗೆ ಚೂರಿ ಹಾಕಿದ್ರು, ಅವರ ನಡವಳಿಕೆಯಿಂದ ಎಲ್ಲ ಶಾಸಕರು ಪಕ್ಷವನ್ನು ಬಿಟ್ಟರು. ಸಿದ್ದರಾಮಯ್ಯ ಸಿಎಂ ಆಗಬೇಕೆಂದು ಹೇಳಿದ್ದು ನಾನು. ಇದರಿಂದ ನಾನು ಹಿರಿಯರ ಕೆಂಗಣ್ಣಿಗೆ ಗುರಿಯಾದೆ ಎಂದು ಬಿ.ಸಿ.ಪಾಟೀಲ್ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ