ಬೆಂಗಳೂರು :ಮೋದಿಯವರ ಅಭಿವೃದ್ಧಿ ಕಾರ್ಯ, ಶ್ರೀರಾಮನ  ಜೈಕಾರ, ಕೇಸರಿಯ ವಿಸ್ತಾರ ಕಾಂಗ್ರೆಸ್ಸಿಗರನ್ನು ಕಂಗೆಡಿಸಿದೆ, ಅಖಾಡಕ್ಕೆ ಬರುವ ಮುನ್ನವೇ  ಸೋಲೊಪ್ಪಿಕೊಳ್ಳುವಂತೆ ಮಾಡಿದೆ". ಓಟಿಗಾಗಿ ನೋಟು ಎನ್ನುತ್ತಿದ್ದ ಕಾಂಗ್ರೆಸ್ಸಿಗರು ಕಳೆದ ಚುನಾವಣೆಯಲ್ಲಿ ಓಟಿಗಾಗಿ ಬಿಟ್ಟಿ ಗ್ಯಾರಂಟಿ ಎಂದರು, ಇದೀಗ ಓಟು ಕೊಡದಿದ್ದರೆ ಗ್ಯಾರಂಟಿ ನಿಲ್ಲಿಸುವ ಏಟು ಕೊಡುವುದಾಗಿ ಮತದಾರರಿಗೆ ಬೆದರಿಕೆ ಒಡ್ಡುತ್ತಿದ್ದಾರೆ, ಏಟಿಗೆ ಎದಿರೇಟು ಕೊಡುವ ತಾಕತ್ತು ನಮ್ಮ ಮತದಾರರಿಗಿದೆ ಎಂದು ವಿಜಯೇಂದ್ರ ಹೇಳಿದ್ದಾರೆ. 
	 
	 ಪ್ರಬುದ್ಧತೆಗೆ ಹೆಸರಾದ ನಮ್ಮ ಕರ್ನಾಟಕದ ಮತದಾರರನ್ನುಆಮಿಷಗಳಿಗೆ ಬಲಿಯಾಗುವ ದುರ್ಬಲ ಮನಸ್ಸಿನವರು ಎಂದು ಭಾವಿಸಿರುವ ಕಾಂಗ್ರೆಸ್ ತಮ್ಮ ಶಾಸಕರೊಬ್ಬರ ಮೂಲಕ ಮತದಾರರನ್ನು ಬಿಕ್ಷುಕರಂತೆ ಬೆದರಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಪಮಾನಿಸುವ ಹೇಳಿಕೆ ಕೊಡಿಸಿರುವುದು ಅಕ್ಷಮ್ಯ ಅಪರಾಧ. ಈ ಕೂಡಲೇ ಕಾಂಗ್ರೆಸ್ ಜನರ ಬಳಿ ಬೇಷರತ್ ಕ್ಷಮೆಯಾಚಿಸಬೇಕು ಎಂದು ವಿಜಯೇಂದ್ರ ಒತ್ತಾಯಿಸಿದ್ದಾರೆ.