ಎಸ್ ಟಿ ಸೋಮಶೇಖರ್ ವಿರುದ್ಧ ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್

ಸೋಮವಾರ, 30 ಸೆಪ್ಟಂಬರ್ 2019 (10:33 IST)
ಬೆಂಗಳೂರು : ಈಗಾಗಲೇ ಅಧಿಕಾರ ಕಳೆದುಕೊಂಡಿರುವ ಕಾಂಗ್ರೆಸ್ ಹೋರಾಟದ ಮೂಲಕವೇ ಪಕ್ಷ ಕಟ್ಟಲು ಮುಂದಾಗಿದೆ ಎನ್ನಲಾಗಿದೆ.



ಬಿಜೆಪಿ ಮತ್ತು ಅನರ್ಹರ ವಿರುದ್ಧ ಸಾಲು ಸಾಲು ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್ ಕಳೆದ 20 ದಿನಗಳಲ್ಲಿ ಬಿಜೆಪಿ ವಿರುದ್ಧ 8 ಪ್ರತಿಭಟನೆ ಮಾಡಿದೆ ಎನ್ನಲಾಗಿದೆ.

 

ಇಂದು ಕೂಡ ಎಸ್ ಟಿ ಸೋಮಶೇಖರ್ ವಿರುದ್ಧ ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್, ದಿನೇಶ್ ಗುಂಡೂರಾವ್ ವಿರುದ್ಧಸೋಮಶೇಖರ್ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಲಿದ್ದು,  ಬೆಂಗಳೂರಿನ ತಲಘಟ್ಟಪುರದಲ್ಲಿ ಕೈ ಕಾರ್ಯಕರ್ತರು ಧರಣಿ ನಡೆಸಲಿದ್ದಾರೆ ಎನ್ನಲಾಗಿದೆ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ