ರಾಜೀನಾಮೆ ನೀಡಿರೋ ಶಾಸಕರನ್ನ ಅನರ್ಹ ಮಾಡಿ ಎಂದ ಕಾಂಗ್ರೆಸ್

ಮಂಗಳವಾರ, 9 ಜುಲೈ 2019 (16:41 IST)
ರಾಜೀನಾಮೆ ನೀಡೋ ಮೂಲಕ ಮೈತ್ರಿ ಸರಕಾರ ಅಸ್ತಿರಗೊಳಿಸಲು ಯತ್ನಿಸಿರುವ ಕಾಂಗ್ರೆಸ್ ಶಾಸಕರು ಕೂಡಲೇ ರಾಜೀನಾಮೆ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕಾಗುತ್ತದೆ ಎಂದು ಕೈ ಪಡೆ ಖಡಕ್ ವಾರ್ನಿಂಗ್ ನೀಡಿದೆ.

ಕಾಂಗ್ರೆಸ್ ನ ಶಾಸಕರು ರಾಜೀನಾಮೆ ನೀಡಿದ್ದಾರೆ. ಆ ಶಾಸಕರನ್ನು ಅನರ್ಹಗೊಳಿಸಬೇಕೆಂದು ಸಭಾಧ್ಯಕ್ಷರಿಗೆ ದೂರು ಕೊಡಲು ಕಾಂಗ್ರೆಸ್ ಸಜ್ಜಾಗಿದೆ.

ಮಾಜಿ ಸಿಎಂ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಶಾಸಕರ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಕಾಂಗ್ರೆಸ್ ನ ಶಾಸಕಾಂಗ ಸಭೆಗೆ ಸುಧಾಕರ, ಅಂಜಲಿ ನಿಂಬಾಳ್ಕರ್, ತುಕಾರಾಂ, ರಾಜೇಗೌಡ, ಎಂಟಿಬಿ ನಾಗರಾಜು, ಫಾತೀಮಾ ಹಾಗೂ ಶಾಮನೂರು ಶಿವಶಂಕರಪ್ಪ ಅವರು ಪಕ್ಷದ ಅನುಮತಿ ಪಡೆದು ಬಂದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ