ಕಾಂಗ್ರೆಸ್ ನವರು ತಮ್ಮ ದಾರಿ ತಾವು ನೋಡಿಕೊಳ್ಳುವುದು ಸೂಕ್ತ ಎಂದು ಬಸವರಾಜ್ ಹೊರಟ್ಟಿ ಹೇಳಿದ್ಯಾಕೆ?

ಮಂಗಳವಾರ, 29 ಜನವರಿ 2019 (08:14 IST)
ಹುಬ್ಬಳ್ಳಿ : ಕಾಂಗ್ರೆಸ್ ನ ಕೆಲವು ಸಚಿವರು ಸಿದ್ಧರಾಮಯ್ಯ ಅವರನ್ನು ನಮ್ಮ ಮುಖ್ಯಮಂತ್ರಿ ಎಂದು ಹೇಳಿಕೆ ನೀಡುತ್ತಿರುವುಕ್ಕೆ ಕಾಂಗ್ರೆಸ್ ಸಚಿವರ ವಿರುದ್ಧ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.


ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ‘ ಕೆಲವು ಸಚಿವರು ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಹೇಳುತ್ತಿದ್ದು, ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ. ಈ ರೀತಿ ಪದೇ ಪದೇ ಮಾತನಾಡುವುದರಿಂದ ಆಡಳಿತದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇದಕ್ಕೆ ಕಡಿವಾಣ ಹಾಕಬೇಕು, ಇಲ್ಲವಾದರೆ ತಮ್ಮ ತಮ್ಮ ದಾರಿಯನ್ನು ನೋಡಿಕೊಳ್ಳುವುದು ಸೂಕ್ತ’ ಎಂದು ಹೇಳಿದ್ದಾರೆ.


‘ಕಾಂಗ್ರೆಸ್ ಶಾಸಕರು ಈ ರೀತಿ ಹೇಳಿಕೆ ನೀಡುವುದರಿಂದ ಸಿದ್ದರಾಮಯ್ಯನವರೇ ಕುಳಿತು ಮಾತನಾಡಿಸುತ್ತಿದ್ದಾರೆಂಬ ಭಾವನೆ ರಾಜ್ಯದ ಜನರಲ್ಲಿ ಮೂಡುತ್ತದೆ. ವಿನಾಕಾರಣ ಹೆಸರು ಹಾಳಾಗುತ್ತದೆ. ಆದ್ದರಿಂದ ಮೈತ್ರಿ ಧರ್ಮದ ಪಾಲನೆ ಮಾಡುವುದು ಎರಡೂ ಪಕ್ಷದ ಕರ್ತವ್ಯ. ಈ ರೀತಿ ಉಸಿರುಗಟ್ಟಿದ ವಾತಾವರಣದಲ್ಲಿ ಕೆಲಸ ಮಾಡಲು ಹೇಗೆ ಸಾಧ್ಯ’ ಎಂದು ಅವರು ಪ್ರಶ್ನಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ