ಕಾಂಗ್ರೆಸ್ ನಲ್ಲಿ ಸಿದ್ದಾರಾಮೋತ್ಸವಕ್ಕೆ ಖರ್ಗೆ ಟಾಂಗ್

ಮಂಗಳವಾರ, 19 ಜುಲೈ 2022 (14:02 IST)
ಎಪ್ಪತ್ತೈದು ವರ್ಷ ಪೂರೈಸುತ್ತಿರುವ ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮ ಒಂದೆಡೆ ಕಾಂಗ್ರೆಸ್ ನಲ್ಲಿ ತಲ್ಲಣ ಸೃಷ್ಟಿಸುತ್ತಿದೆ. ಈ ಮಧ್ಯೆ ಎಂಬತ್ತು ವರ್ಷ ಪೂರೈಸುತ್ತಿರುವ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ತಮ್ಮ ಜನ್ಮದಿನ ಆಚರಿಸದಂತೆ ಪತ್ರ ಬರೆದಿದ್ದಾರೆ.
ಕಾರ್ಯಕರ್ತರಿಗೆ ಹಾಗೂ ಅಭಿಮಾನಿಗಳಿಗೆ ಪತ್ರ ಬರೆದಿರುವ ಅವರು, ಜುಲೈ 21ಕ್ಕೆ ನನಗೆ 80 ವರ್ಷವಾಗುತ್ತದೆ. ರಾಜಕೀಯಕ್ಕೆ ಬಂದು 50 ವರ್ಷ ಪೂರ್ಣವಾಗುತ್ತದೆ. ಅಂದು ಸದನ ಚಾಲ್ತಿಯಲ್ಲಿರುವ ಜತೆಗೆ ಕಾಂಗ್ರೆಸ್ ಪಕ್ಷದ ತ್ಯಾಗದ ಪ್ರತಿರೂಪ ಸೋನಿಯಾ ಗಾಂಧಿಯವರ ಇಡಿ ವಿಚಾರಣೆ ಅಗ್ನಿ ಪರೀಕ್ಷೆ ನಡೆಯಲಿದೆ. ಈ ಸಂದರ್ಭದಲ್ಲಿ ಅವರ ಜತೆ‌ ನಿಲ್ಲುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ