ಕೋಮುವಾದಿಗಳಿಗೆ ಕಾಂಗ್ರೆಸ್ ಬೆಂಬಲ : ದೇವೇಗೌಡ

ಶನಿವಾರ, 11 ಜೂನ್ 2022 (09:28 IST)
ರಾಜ್ಯಸಭೆ ಚುನಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಜಾತ್ಯತೀತ ತತ್ವದ ಬಗ್ಗೆ ಮಾತನಾಡುವ ಕಾಂಗ್ರೆಸ್ ಕೋಮುವಾದಿಗಳಿಗೆ ಬೆಂಬಲ ನೀಡಿದೆ.

ರಾಜ್ಯಸಭೆ ಚುನಾವಣೆ ವಿಚಾರವಾಗಿ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರು ಕೇಂದ್ರದ ಕಾಂಗ್ರೆಸ್ ನಾಯಕರ ಜೊತೆ ಮಾತನಾಡಿದ್ದರು. ಆದರೆ, ರಾಜ್ಯ ನಾಯಕರ ಬಳಿ ಕೇಂದ್ರದ ನಾಯಕರಿಗೂ ಕಿಮ್ಮತ್ತು ಇಲ್ಲ ಎಂಬುದು ಗೊತ್ತಾಗಿದೆ.

ಕಾಂಗ್ರೆಸ್ ಯಾರ ಟೀಂ ಎಂಬುದು ರಾಜ್ಯದ ಜನರಿಗೆ ಗೊತ್ತಾಗಿದೆ ಎಂದು ವ್ಯಂಗ್ಯವಾಡಿದರು.  ಜನತಾದಳ ಪಕ್ಷದಲ್ಲಿ ಅಸಮಾಧಾನಿತರು ಇದ್ದಾರೆ ಎನ್ನುತ್ತಿದ್ದರು. ಆದರೆ, ಶ್ರೀನಿವಾಸ್ ಗೌಡ ಅವರನ್ನು ಬಿಟ್ಟು ಉಳಿದ ಎಲ್ಲರೂ ಪಕ್ಷದ ಜೊತೆಗೆ ಇದ್ದಾರೆ.

ಇದರ ಬಗ್ಗೆ ಸಂಜೆ ಆರು ಗಂಟೆ ನಂತರ ನಾನು ಪ್ರತಿಕ್ರಿಯೆ ನೀಡುವೆ. ಜಿ.ಟಿ.ದೇವೇಗೌಡರು, ರಾಮಸ್ವಾಮಿ, ಶಿವಲಿಂಗೇಗೌಡರು ಎಲ್ಲರೂ ನಮ್ಮ ಜೊತೆಯಲ್ಲೇ ಇದ್ದಾರೆ ಎಂದು ಸ್ಪಷ್ಟಪಡಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ