ಸಿಎಂ ಸಿದ್ದರಾಮಯ್ಯ ಮನೆ ಮುಂದೆ ಡ್ಯಾನ್ಸ್ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು

ಗುರುವಾರ, 22 ಜೂನ್ 2017 (11:09 IST)
ಬೆಂಗಳೂರು: ಇಂದು ಬೆಳ್ಳಂ ಬೆಳಿಗ್ಗೆ ಸಿಎಂ ಸಿದ್ಧರಾಮಯ್ಯ ಮನೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ದಂಡೇ ನೆರೆದಿತ್ತು. ಅಷ್ಟೇ ಅಲ್ಲ, ತಮಟೆ ಬಾರಿಸಿ ಡ್ಯಾನ್ಸ್ ಮಾಡಿ ಜೋರಾಗಿ ಸಂಭ್ರಮಾಚರಿಸಿದರು.


 
ಇದಕ್ಕೆಲ್ಲಾ ಕಾರಣ ನಿನ್ನೆಯಷ್ಟೇ ಸಿಎಂ ರೈತರ ಸಾಲಮನ್ನಾ ಮಾಡಿದ್ದು. 50 ಸಾವಿರ ರೂ. ವರೆಗಿನ ಸಾಲ ಮನ್ನಾ ಮಾಡಿದ ಸಿಎಂ ನಿರ್ಧಾರವನ್ನು ಸ್ವಾಗತಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು ನೃತ್ಯ ಮಾಡಿದರಲ್ಲದೆ, ಸಿಹಿ ಹಂಚಿ ಸಂಭ್ರಮಿಸಿದರು.

ಸಿಎಂ ಸಿದ್ದರಾಮಯ್ಯ ಅವರ ನಿರ್ಧಾರವನ್ನು ಸ್ವಾಗತಿಸಿರುವ ಹಲವು ರೈತ ಮುಖಂಡರು ಸ್ವತಃ ಸಿಎಂ ನಿವಾಸ ‘ಕಾವೇರಿ’ಗೆ ಬಂದು ಶುಭಕೋರಿದ್ದಾರೆ. ಚುನಾವಣೆ ದೃಷ್ಟಿಯಿಂದ ಸಿದ್ದರಾಮಯ್ಯನವರ ಈ ನಿರ್ಧಾರ ಕಾಂಗ್ರೆಸ್ ಗೆ ಲಾಭ ತಂದುಕೊಡಲಿದೆ ಎಂದು ಲೆಕ್ಕಾಚಾರ ಹಾಕಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ