ಉಪಚುನಾವಣೆಯಿಂದ ದೂರ ಉಳಿದ ಕಾಂಗ್ರೆಸ್ ನಾಯಕ ಸಿಎಂ ಇಬ್ರಾಹಿಂ, ಕಾರಣವೇನು ಗೊತ್ತಾ?

ಮಂಗಳವಾರ, 26 ನವೆಂಬರ್ 2019 (11:04 IST)
ಬೆಂಗಳೂರು : ವಿಧಾನಪರಿಷತ್ ವಿಪಕ್ಷ ನಾಯಕ ಸ್ಥಾನ ಕೈತಪ್ಪಿದ್ದಕ್ಕೆ ಬೇಸರಗೊಂಡ ಕಾಂಗ್ರೆಸ್ ನಾಯಕ ಸಿಎಂ ಇಬ್ರಾಹಿಂ ಪ್ರಚಾರ ಕಾರ್ಯದಿಂದ ದೂರ ಉಳಿದಿದ್ದಾರೆ ಎನ್ನಲಾಗಿದೆ.



ಹೌದು. ಡಿಸೆಂಬರ್ 5 ರಂದು 15 ಕ್ಷೇತ್ರದ ಉಪಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲು ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದೆ. ಆದರೆ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಇಬ್ರಾಹಿಂ ಹೆಸರಿದ್ದರೂ ಕೂಡ ಅವರು ಪ್ರಚಾರ ಗೈರಾಗಿ ವಿದೇಶ ಪ್ರವಾಸದಲ್ಲಿದ್ದಾರೆ.


ಉಪಚುನಾವಣೆಯ ಈ ಹೊತ್ತಿನಲ್ಲಿ ಇಬ್ರಾಹಿಂ ವಿದೇಶ ಪ್ರವಾಸ ಕೈಗೊಂಡಿದ್ದು, ಇದು ಕಾಂಗ್ರೆಸ್ ನಾಯಕರಲ್ಲಿ ಬೇಸರವನ್ನುಂಟು ಮಾಡಿದೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ