ಪತಿಯನ್ನು ಜೈಲಿನಿಂದ ಬಿಡಿಸುವುದಾಗಿ ನಂಬಿಸಿ ಮಹಿಳೆಯ ಮೇಲೆ ನಿರಂತರ ಅತ್ಯಾಚಾರ

ಗುರುವಾರ, 6 ಡಿಸೆಂಬರ್ 2018 (07:18 IST)
ಮುಂಬೈ : ಪತಿಯನ್ನು ಜೈಲಿನಿಂದ ಬಿಡುಗಡೆ ಮಾಡಿಸುವುದಾಗಿ ಹೇಳಿ ಮಹಿಳೆ ಮೇಲೆ ವ್ಯಕ್ತಿಯೊಬ್ಬ ನಿರಂತರ ಅತ್ಯಾಚಾರ ಎಸಗಿದ ಘಟನೆ ಮಹಾರಾಷ್ಟ್ರದ ಬಾರಾಮತಿ ಜಿಲ್ಲೆಯಲ್ಲಿ ನಡೆದಿದೆ.


ಮಚ್ಚಿಂದ್ರ ಶಂಕರ್ ಟಿಂಗ್ರೆ ಅತ್ಯಾಚಾರ ಎಸಗಿದ ಆರೋಪಿಯಾಗಿದ್ದು, ಈತ ಮಹಿಳೆಯೊಬ್ಬಳ  ಪತಿ ಕೊಲೆಯ  ಆರೋಪದ ಮೇಲೆ ಜೈಲು ಶಿಕ್ಷೆಗೆ ಒಳಗಾಗಿರುವುದನ್ನು ತಿಳಿದು ಆತನನ್ನು ಜೈಲಿನಿಂದ ಬಿಡಿಸುವುದಾಗಿ ಹೇಳಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅಷ್ಟೇ ಅಲ್ಲದೇ ಆಕೆಯ ಬೆತ್ತಲೆ ಫೋಟೋ ಮತ್ತು ವಿಡಿಯೋಗಳನ್ನು ಇಟ್ಟುಕೊಂಡು ಹಣಕ್ಕಾಗಿ ಬೆದರಿಸಿದ್ದಲ್ಲದೇ ಆಕೆಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ.


ಆತ ಬೆದರಿಸಿದ ಹಿನ್ನಲೆಯಲ್ಲಿ ಸಂತ್ರಸ್ತೆ ಈ ವಿಚಾರವನ್ನು ಎಲ್ಲೂ ತಿಳಿಸಿರಲಿಲ್ಲ. ಆದರೆ ಆಕೆಯ ಬೆತ್ತಲೆ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಎಂಬುದನ್ನು ತಿಳಿದ ಮಹಿಳೆ ಇದೀಗ ಪೊಲೀಸರಿಗೆ ದೂರು ನೀಡಿದ್ದಾಳೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ