ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಪೇದೆ

ಶುಕ್ರವಾರ, 3 ಏಪ್ರಿಲ್ 2015 (11:37 IST)
ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಪೇದೆಯೋರ್ವ ಸರ್ಕಾರ ಸೇವೆಗಾಗಿ ನೀಡಿದ್ದ ತನ್ನ ಗನ್‌ನಿಂದ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ನಡೆದಿದೆ. 
 
ತನಗೆ ತಾನೇ ಗುಂಡು ಹಾರಿಸಿಕೊಳ್ಳುವ ಮೂಲಕ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಪೇದೆ ಸೋಮಶೇಖರ್ ಗೊಲ್ಲರ್(40) ಎಂದು ಹೇಳಲಾಗಿದ್ದು, ಈತ ಜಿಲ್ಲಾ ಸಶಸ್ತರ ಮೀಸಲು ಪೊಲೀಸ್ ಪಡೆಯ ಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದ. ಇನ್ನು ಈತ ಜಿಲ್ಲೆಯ ಸವಣೂರು ತಾಲೂಕಿನ ಕುಣಿಮೆಳ್ಳಳ್ಳಿ ನಿವಾಸಿ ಎನ್ನಲಾಗಿದ್ದು, ಆತ್ಮಹತ್ಯೆಗೆ ಕಾರಣ ಏನೆಂಬುದು ತಿಳಿದು ಬಂದಿಲ್ಲ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ.  
 
ನಗರ ಪೊಲೀಸರು ಪ್ರಕರಣ ದಾಖಲಿಸಿಕಂಡು ತನಿಖೆ ಮುಂದುವರಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ