ನ್ಯಾಯಾಂಗ ನಿಂದನೆ: ಸಚಿವ ಜಮೀರ್ ಅಹ್ಮದ್ ವಿರುದ್ಧ ದೂರು

Sampriya

ಶನಿವಾರ, 28 ಸೆಪ್ಟಂಬರ್ 2024 (18:48 IST)
ಬೆಂಗಳೂರು: ಹೈಕೋರ್ಟ್ ತೀರ್ಪಿನ ಬಗ್ಗೆ ಪೊಲಿಟಿಕಲ್ ಜಡ್ಜ್‌ಮೆಂಟ್ ಎಂದು ಹೇಳಿಕ ನೀಡಿದ್ದ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವಂತೆ ದೂರು ನೀಡಲಾಗಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ ಹೈಕೋರ್ಟ್ ಆದೇಶ ಬಗ್ಗೆ ಪ್ರತಿಕ್ರಿಯಿಸುವಾಗ ಇದು ಪೊಲಿಟಿಕಲ್ ಜಡ್ಜ್‌ಮೆಂಟ್ ಎಂದು ಹೇಳಿ ವಿವಾದ ಸೃಷ್ಟಿಸಿದರು.

ಇದೀಗ ಅಲ್ಪಸಂಖ್ಯಾತ ಕಲ್ಯಾಣ ಖಾತೆಯ ಸಚಿವ ಜಮೀರ್‌ ಅಹ್ಮದ್‌ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಹಾಂ ದೂರು ನೀಡಿದ್ದಾರೆ.

ಹೈಕೋರ್ಟ್‌ ತೀರ್ಪನ್ನು ಪೊಲಿಟಿಕಲ್‌ ಜಡ್ಜ್‌ಮೆಂಟ್‌ ಎಂದು ಕರೆದಿದ್ದಾರೆ. ಹೀಗಾಗಿ ಜಮೀರ್‌ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವಂತೆ ಅಡ್ವೋಕೆಟ್‌ ಜನರಲ್‌ ಶಶಿಕಿರಣ್ ಶೆಟ್ಟಿಗೆ ಟಿ ಜೆ ಅಬ್ರಹಾಂ ದೂರು ಕೊಟ್ಟಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ