ಅರಬ್ಬಿ ಸಮುದ್ರದಲ್ಲಿ ಮುಂದುವರಿದ ಕ್ಯಾರ್ ಚಂಡಮಾರುತದ ಅಬ್ಬರ

ಶನಿವಾರ, 26 ಅಕ್ಟೋಬರ್ 2019 (11:07 IST)
ಉಡುಪಿ : ಇಂದು ಕೂಡ ಅರಬ್ಬಿ ಸಮುದ್ರದಲ್ಲಿ ಕ್ಯಾರ್ ಚಂಡಮಾರುತದ ಅಬ್ಬರ ಮುಂದುವರಿದಿದ್ದು, ಕರ್ನಾಟಕ ಕರಾವಳಿ ಭಾಗದಲ್ಲಿ ಮಳೆಯ ರಭಸ  ಜೋರಾಗಿದೆ.




ಈ ಹಿನ್ನಲೆಯಲ್ಲಿ ಇಂದು ಕೂಡ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕರ್ನಾಟಕದ ಕರಾವಳಿ, ಮಲೆನಾಡು, ಮಹಾರಾಷ್ಟ್ರ, ಗೋವಾ, ಪಶ್ಚಿಮ ಬಂಗಾಳ , ಮೇಘಾಲಯ, ಅಸ್ಸಾಂ ನಲ್ಲಿ ಬಿರುಗಾಳಿ ಸಹಿತ ಮಳೆಯಾಗುತ್ತಿದೆ.


ಈ ಮಳೆಗೆ ಈಗಾಗಲೇ ಜನಜೀವನ ಅಸ್ತವ್ಯಸ್ತವಾಗಿದ್ದು,  ಇನ್ನು ಎರಡ್ಮೂರು ದಿನಗಳ ಕಾಲ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ