ಕೊರೊನಾ ಕೇಸ್ ಹೆಚ್ಚಳ : ತಬ್ಲಿಘಿಗಳನ್ನು ಕೂಡಲೇ ಹುಡುಕಿ ಎಂದ ಸಚಿವ

ಸೋಮವಾರ, 13 ಏಪ್ರಿಲ್ 2020 (17:29 IST)
ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿರುವುದರಿಂದ ಸಚಿವರೊಬ್ಬರು ಖಡಕ್ ತೀರ್ಮಾನಕ್ಕೆ ಮುಂದಾಗಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿರುವುದರಿಂದ ಮುಂಜಾಗೃತ ಕ್ರಮದ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ ಸಚಿವ ಜಗದೀಶ್ ಶೆಟ್ಟರ್ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಸಲಾಯಿತು.

ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಮೂರು ಕೊರೊನಾ ಪ್ರಕರಣಗಳು ದೃಢಪಟ್ಟಿರುವುದರಿಂದ ರಾಯಬಾಗ ತಾಲ್ಲೂಕಿನ ಕುಡಚಿ ಸೇರಿದಂತೆ ಎಲ್ಲ ಪ್ರದೇಶಗಳಲ್ಲಿ ಇನ್ನಷ್ಟು ಬಿಗಿ ಕ್ರಮ ತೆಗೆದುಕೊಂಡು ಸಂಪೂರ್ಣ ಬಂದ್ ಮಾಡಲು ಸೂಚಿಸಲಾಗಿದೆ ಎಂದಿದ್ದಾರೆ.

ತಬ್ಲಿಘಿಗಳ ಜತೆ ಸಂಪರ್ಕ ಹೊಂದಿರುವವರನ್ನು ತಕ್ಷಣವೇ ಗುರುತಿಸುವ ಕೆಲಸವಾಗಬೇಕು ಎಂದು ಸಚಿವರು ಖಡಕ್ಕಾಗಿ ಸೂಚನೆ ಕೊಟ್ಟಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ