ಶಿವಮೊಗ್ಗದಲ್ಲಿ ಕೊರೊನಾ ಕೇಸ್ ಪತ್ತೆಯಾಗಿಲ್ಲ- ಸಚಿವ ಕೆಎಸ್ ಈಶ್ವರಪ್ಪ ಮಾಹಿತಿ

ಶುಕ್ರವಾರ, 3 ಏಪ್ರಿಲ್ 2020 (11:13 IST)
ಶಿವಮೊಗ್ಗ : ಇಂದಿನಿಂದಲ್ಲೇ ಮಾರಾಟಕ್ಕೆ ಅವಕಾಶ ನೀಡಿದೆ. 43 ವಾಹನಗಳಲ್ಲಿ ತರಕಾರಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು  ಸಚಿವ ಕೆಎಸ್ ಈಶ್ವರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆಎಸ್ ಈಶ್ವರಪ್ಪ, ಶಿವಮೊಗ್ಗದಲ್ಲಿ ಕೊರೊನಾ ಕೇಸ್ ಪತ್ತೆಯಾಗಿಲ್ಲ. ಮರ್ಕಜ್ ನಲ್ಲಿ ಶಿವಮೊಗ್ಗದ 24 ಜನ ಭಾಗಿಯಾಗಿದ್ದರು. 24 ಜನರಿಗೂ ಪರೀಕ್ಷೆಗೆ ಒಳಪಡಿಸಲಾಗಿದೆ. 10 ಜನರ ವರದಿ ನೆಗೆಟಿವ್ ಬಂದಿದೆ.11 ಜನರ ವರದಿ ಬರಬೇಕಿದೆ ಎಂದು ತಿಳಿಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ