ರಾಜ್ಯದಲ್ಲಿ ಕೊರೊನಾಗೆ ಮೊದಲ ಸಾವು : ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದೇನು?

ಬುಧವಾರ, 11 ಮಾರ್ಚ್ 2020 (17:23 IST)

ರಾಜ್ಯದಲ್ಲಿ ಕೊರೊನಾ ವೈರಸ್ ನಿಂದ ವ್ಯಕ್ತಿ ಸಾವಿಗೀಡಾಗಿರುವ ಕುರಿತು ಆರೋಗ್ಯ ಇಲಾಖೆ ಸಚಿವರು ಸ್ಪಷ್ಟನೆ ನೀಡಿದ್ದಾರೆ.
 

ಕಲಬುರಗಿಯಲ್ಲಿ ಮಹ್ಮದ್ ಹುಸೇನ್ ಸಿದ್ಧಿಕಿ ಕೊರೊನಾ ವೈರಸ್ ನಿಂದ ಸಾವನ್ನಪ್ಪಿಲ್ಲ. ಅವರ ಸಾವಿಗೆ ನಿಖರ ಕಾರಣ ಇನ್ನೂ ಗೊತ್ತಾಗಿಲ್ಲ ಎಂದು ಆರೋಗ್ಯ ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ.

ಸಿದ್ಧಿಕಿಯಲ್ಲಿ ಕೊರೊನಾ ಇರೋ ಕುರಿತು ಶಂಕೆ ವ್ಯಕ್ತವಾಗಿದೆಯೇ ವಿನಃ ಅವರ ಸಾವಿನ ನಿಜವಾದ ಕಾರಣ ಗೊತ್ತಾಗಿಲ್ಲ.

ಜನರ ಹಿತದೃಷ್ಟಿಯಿಂದಾಗಿ ಅವರ ಅಂತ್ಯಸಂಸ್ಕಾರಕ್ಕೆ ಕೆಲವು ಕ್ರಮ ಕೈಗೊಳ್ಳಲಾಗಿದೆ.

ಕೊರೊನಾ ವೈರಸ್ ಕುರಿತು ಅನಗತ್ಯ ಭಯ, ಆತಂಕ ಸೃಷ್ಟಿ ಮಾಡುವುದು ಬೇಡ ಅಂತ ಹೇಳಿದ್ದಾರೆ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ