4 ತಬ್ಲಿಘಿಗಳಲ್ಲಿ ಕೊರೊನಾ ಸೋಂಕು : ರಾಜ್ಯದಲ್ಲಿ ಆತಂಕ
ರಾಜ್ಯದಲ್ಲಿ ಮತ್ತೆ ನಾಲ್ವರು ತಬ್ಲಿಘಿಗಳಲ್ಲಿ ಕೊರೊನಾ ವೈರಸ್ ಲಕ್ಷಣಗಳು ದೃಢಪಟ್ಟಿದೆ.
ಒಂದೇ ದಿನ ನಾಲ್ವರಿಗೆ ಕೋವಿಡ್-19 ಸೋಂಕು ತಗುಲಿರುವುದು ತೀವ್ರ ಆತಂಕ ಉಂಟು ಮಾಡಿದೆ. ಕೋವಿಡ್-19 ಸೋಂಕು ತಗುಲಿದವರು ನಾಲ್ವರೂ ರಾಯಬಾಗ ತಾಲೂಕಿಗೆ ಸೇರಿದವರಾಗಿದ್ದಾರೆ. ಇವರೆಲ್ಲರೂ ದೆಹಲಿ ನಿಜಾಮುದ್ದೀನ್ ಮರ್ಕಜ್ ನಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದರು.
ಕೋವಿಡ್ 19 ಸೋಂಕು ದೃಢಪಟ್ಟವರಲ್ಲಿ ಇಬ್ಬರು ಮಹಿಳೆಯರು ಸೇರಿದ್ದಾರೆ ಎಂದು ರಾಜ್ಯ ಸರಕಾರ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.
ನಾಲ್ವರಿಗೆ ಕೋವಿಡ್-19 ಸೋಂಕು ತಗುಲಿದ ಕಾರಣ ರಾಯಬಾಗ ತಾಲೂಕಿನಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.