ಈ ವೇಳೆ ಮಾತನಾಡಿದ ಅವರು, ಕಿಕ್ ಬ್ಯಾಕ್ ಪ್ರಕರಣದಲ್ಲಿ ನ್ಯಾಯಾಲಯ ನಿಮಗೆ ಕ್ಲೀನ್ ಚಿಟ್ ನೀಡಿರಬಹುದು. ಆದರೆ, ನಿಮ್ಮ ಅಕೌಂಟ್ಗೆ ಬಂದ ಹಣ ಯಾವ ಮೂಲದ್ದಾಗಿದೆ ? ಪ್ರಜಾಪ್ರಭುತ್ವವನ್ನು ಗಾಳಿಗೆ ತೂರಿದ್ದೀರಾ. ಇದು ಒಬ್ಬ ಯಡಿಯೂರಪ್ಪನ ವಿಚಾರವಲ್ಲ.ಬಿಜೆಪಿಯಲ್ಲಿ ಇಂತಹ ಭ್ರಷ್ಟರಿರುವುದರಿಂದ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಅವಕಾಶ ನೀಡಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅದೃಷ್ಟದಿಂದ ಡಾ.ಜಿ.ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ ಎಂದು ಕೆಲವರು ಮಾತಾನಾಡುತ್ತಿದ್ದಾರೆ. ಆದರೆ, ನಾನು ಕಷ್ಟು ಪಟ್ಟು ಈ ಮಟ್ಟಕ್ಕೆ ಬೆಳದಿದ್ದೇನೆ. 30 ವರ್ಷಗಳಿಂದ ಕೆಪಿಸಿಸಿಯಲ್ಲಿ ಪದಾಧಿಕಾರಿಯಾಗಿದ್ದೇನೆ ಎಂದು ವಿರೋಧಿಗಳಿಗೆ ಟಾಂಗ್ ನೀಡಿದರು.