ದೀಪಾವಳಿಗೆ ದಿನಗಣನೆ: ನೈಋತ್ಯ ರೈಲ್ವೆಯಿಂದ ಪ್ರಯಾಣಿಕರಿಗೆ ಗುಡ್‌ನ್ಯೂಸ್

Sampriya

ಸೋಮವಾರ, 13 ಅಕ್ಟೋಬರ್ 2025 (19:41 IST)
ಬೆಂಗಳೂರು: ದೀಪಾವಳಿ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದುಇದೀಗ ಪ್ರಯಾಣಿಕರಿಗೆ ನೈಋತ್ಯ ರೈಲ್ವೆಯಿಂದ ವಿಶೇಷ ರೈಲುಗಳಲು ಓಡಾಡಲಿದೆ.

ಪ್ರಯಾಣಿಕರಿಗೆ ಅನುಕೂಲವಾಗಲೆಂದು ವಿಶೇಷ ರೈಲುಗಳು ಹುಬ್ಬಳ್ಳಿ, ಮಂಗಳೂರು ಹಾಗೂ ಬೆಂಗಳೂರು ನಡುವೆ ಸಂಚರಿಸಲಿದ್ದು, ಜನರ ಸಂಚಾರಕ್ಕೆ ಅನುಕೂಲ ಮಾಡಿಕೊಡಲಿದೆ. 

ಇಲ್ಲಿದೆ ವಿಶೇಷ ರೈಲುಗಳ ಮಾಹಿತಿ: 

1. ರೈಲು ಸಂಖ್ಯೆ 07353/07354: ಎಸ್ಎಸ್ಎಸ್ ಹುಬ್ಬಳ್ಳಿ–ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ರೈಲು ಇದೇ
17ರಂದು ಸಂಜೆ 4ಕ್ಕೆ ಹೊರಟು ಮಾರನೇ ದಿನ ಬೆಳಗ್ಗೆ 11.15ಕ್ಕೆ ಮಂಗಳೂರು ತಲುಪಲಿದೆ. 

ಈ ರೈಲು ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಯಶವಂತಪುರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಮತ್ತು ಬಂಟ್ವಾಳ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ರೈಲು ಸಂಖ್ಯೆ 07354: ಮಂಗಳೂರು ಜಂಕ್ಷನ್–ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ರೈಲು. ಇದೇ 18ರಂದು ಮಧ್ಯಾಹ್ನ 2:35ಕ್ಕೆ ಮಂಗಳೂರು ಜಂಕ್ಷನ್‌ನಿಂದ ಹೊರಟು, ಅದೇ ದಿನ ರಾತ್ರಿ 11:15ಕ್ಕೆ ಯಶವಂತಪುರ ತಲುಪಲಿದೆ.

ರೈಲು ಸಂಖ್ಯೆ 06229: ಯಶವಂತಪುರ-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ಇದೇ ಅ.19ರಂದು ರಾತ್ರಿ 12:15ಕ್ಕೆ ಯಶವಂತಪುರದಿಂದ ಹೊರಟು, ಅದೇ ದಿನ ಬೆಳಗ್ಗೆ 11:15ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. 

ರೈಲು ಸಂಖ್ಯೆ 06230: ಮಂಗಳೂರು ಜಂಕ್ಷನ್-ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್‌ಪ್ರೆಸ್ ರೈಲು ಇದೇ ಅ.19ರಂದು 2:35 ಗಂಟೆಗೆ ಮಂಗಳೂರು ಜಂಕ್ಷನ್‌ನಿಂದ ಹೊರಟು, ಮರುದಿನ 12:30 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ. 

3. ರೈಲು ಸಂಖ್ಯೆ 06507/06508 ಬೆಳಗಾವಿ-ಎಸ್ಎಂವಿಟಿ ಬೆಂಗಳೂರು-ಬೆಳಗಾವಿ ವಿಶೇಷ ಎಕ್ಸ್‌ಪ್ರೆಸ್ (1 ಟ್ರಿಪ್):

ರೈಲು ಸಂಖ್ಯೆ 06507: ಬೆಳಗಾವಿ -ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು ಇದೇ ಅ.18ರಂದು 8:00 ಗಂಟೆಗೆ ಬೆಳಗಾವಿಯಿಂದ ಹೊರಟು, ಅದೇ ದಿನ ರಾತ್ರಿ 07:45 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.

ರೈಲು ಸಂಖ್ಯೆ 06508: ಅ.18ರಂದು ರಾತ್ರಿ 09:00 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು, ಅ.19ರಂದು ಬೆಳಗ್ಗೆ 08:35 ಗಂಟೆಗೆ ಬೆಳಗಾವಿಯನ್ನು ತಲುಪಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ