ಬಂಧಿಸಲಾಗಿದ್ದ ಹಿನ್ನೆಲೆಯಲ್ಲಿ ಆಱೋಪಿ ಅಶ್ವಿನ್ ನನ್ನು ಇಂದು ಬೆಳಗ್ಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಚಾರಣೆ ವೇಳೆ, ಸರ್ಕಾರಿ ಅಭಿಯೋಜಕ ಜನಾರ್ಧನ್ ಅವರು 10 ದಿನಗಳ ಕಾಲ ಎಸ್ಐಟಿಗೆ ವಹಿಸಬೇಕೆಂದು ಹಾಗೂ ಎಸ್ಐಟಿ ತನಿಖಾಧಿಕಾರಿ ಲಾಬೂರಾಂ ಅವರು, ಆಱೋಪಿ ಅಶ್ವಿನ್ ಸಾಕಷ್ಟು ಜನರಿಗೆ ವಿವಿಧ ನಂಬರ್ ಗಳಿಂದ ದೂರವಾಣಿ ಕರೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ತನಿಖೆಗಾಗಿ ಹೊರ ರಾಜ್ಯಗಳಿಗೆ ತೆರಳುವ ಸನ್ನಿವೇಶಗಳಿವೆ. ಆದ್ದರಿಂದ 14 ದಿನಗಳ ಕಾಲ ಎಸ್ಐಟಿ ವಶಕ್ಕೆ ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪರಾಮರ್ಶೆ ನಡೆಸಿದ ನ್ಯಾಯಾಧೀಶರು, ಕೊನೆಗೂ 9 ದಿನಗಳ ಕಾಲ ಅಂದರೆ ಆಗಸ್ಟ್ 6ರ ವರೆಗೆ ಎಸ್ಐಟಿ ವಶಕ್ಕೆ ನೀಡಿ ಆದೇಶಿಸಿದೆ. ಇದೇ ವೇಳೆ, ಆರೋಪಿ ಅಶ್ವಿನ್ಗೆ ಸಮಯಕ್ಕೆ ಸರಿಯಾಗಿ ಆಹಾರ ಮತ್ತು ಆರೋಗ್ಯಕ್ಕೆ ಚಿಕಿತ್ಸೆ ನೀಡುವಂತೆ ಸೂಚಿಸಿದೆ.