ಸಂಜಯ್ ರಾವತ್ಗೆ ಕೋರ್ಟ್‌ನಿಂದ ಜಾಮೀನು ಮಂಜೂರು

ಗುರುವಾರ, 9 ಫೆಬ್ರವರಿ 2023 (11:07 IST)
ಬೆಳಗಾವಿ : ಶಿವಸೇನೆ ವಕ್ತಾರ, ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಸೇರಿದಂತೆ ಇಬ್ಬರಿಗೆ ಬೆಳಗಾವಿಯ ಜಿಲ್ಲಾ ಮತ್ತು ಪ್ರಧಾನ ಸತ್ರ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಮಂಜೂರಾಗಿದಾಗಿದೆ.

50 ಸಾವಿರ ರೂ. ಬಾಂಡ್ ನಿಗದಿತ ಸಮಯದಲ್ಲಿ ಕೋರ್ಟ್ಗೆ ಹಾಜರಾಗಬೇಕೆಂದು ಕೋರ್ಟ್ ಷರತ್ತು ವಿಧಿಸಿದೆ.

ನಗರದಲ್ಲಿ 2018ರ ಮೇ 12 ರಂದು ನಡೆದಿದ್ದ ಖಾಸಗಿ ಕಾರ್ಯಕ್ರಮದಲ್ಲಿ ಸಂಜಯ್ ರಾವತ್ ವಿರುದ್ಧ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಪ್ರಚೋದನಾತ್ಮಕ ಭಾಷಣ ಮಾಡಿರುವ ಆರೋಪ ಇತ್ತು. ಈ ಸಂಬಂಧ ಟಿಳಕವಾಡಿ ಠಾಣೆಯಲ್ಲಿ ಚುನಾವಣೆ ಆಯೋಗದ ಅಧಿಕಾರಿಗಳು ದೂರು ದಾಖಲಿಸಿದ್ದರು.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ