ಜಿಲ್ಲೆಯ ಸೊರಬ ತಾಲೂಕಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಉಮಾಶ್ರೀ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿದೆ.
2014ರಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಸಚಿವೆ ಉಮಾಶ್ರೀ, ಗೆಳೆಯನ ಪತ್ನಿಯ ಮೇಲೆ ಅತ್ಯಾಚಾರ ಮಾಡುವ ಬಿಜೆಪಿ ಮಾಜಿ ಶಾಸಕ ಹಾಲಪ್ಪ ರೇಪಿಸ್ಟ್ ಎಂದು ಆರೋಪಿಸಿದ್ದರು.
ನನ್ನ ವಿರುದ್ಧ ಅತ್ಯಾಚಾರ ಮಾಡಿದ ಆರೋಪ ಸಾಬೀತಾಗದ ಹಿನ್ನೆಲೆಯಲ್ಲಿ ಸಚಿವೆ ಉಮಾಶ್ರೀ ಆರೋಪ ನನ್ನ ಘನತೆ ಗೌರವಕ್ಕೆ ಕುಂದು ತಂದಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡ ಹಾಲಪ್ಪ ಸೊರಬ ಪಟ್ಟಣದ ಕೋರ್ಟ್ನಲ್ಲಿ ಪ್ರಕರಣ ದಾಖಲಿಸಿದ್ದರು.
ನ್ಯಾಯಮೂರ್ತಿ ಶೆಟ್ಟಿಗಾರ್, ಸಚಿವೆ ಉಮಾಶ್ರೀ ಜುಲೈ 20 ರಂದು ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ಕೋರ್ಟ್ ಆದೇಶಿಸಿದೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ