ತಾಕತ್ತಿದ್ರೆ, ಅಪ್ಪನಿಗೆ ಹುಟ್ಟಿದ್ರೆ ಬಂದು ಎದುರಿಗೆ ನಿಂತು ಟೀಕೆ ಮಾಡ್ಲೀ- ಡಿ.ಸಿ.ತಮ್ಮಣ್ಣ ವಿವಾದತ್ಮಕ ಹೇಳಿಕೆ

ಭಾನುವಾರ, 31 ಮಾರ್ಚ್ 2019 (10:36 IST)
ಮಂಡ್ಯ : ತಾಕತ್ತಿದ್ರೆ, ಅಪ್ಪನಿಗೆ ಹುಟ್ಟಿದ್ರೆ ಬಂದು ಎದುರಿಗೆ ನಿಂತು ಟೀಕೆ ಮಾಡ್ಲೀ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ವಿವಾದತ್ಮಕ ಹೇಳಿಕೆ ನೀಡಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದಿಂದ ಕಣದಲ್ಲಿರುವ ನಿಖಿಲ್ ಕುಮಾರಸ್ವಾಮಿಯವರ ಪರವಾಗಿ ಮದ್ದೂರು ಎಳನೀರು ಮಾರುಕಟ್ಟೆ ಬಳಿ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು,’ ಎಳನೀರು ಮಾರುಕಟ್ಟೆ ಒಳಗೆ ಮಜಾ ಮಾಡ್ಕೊಂಡು ಟೀಕೆ ಮಾಡ್ಕೊಂಡು ಇದ್ದಿರಾ. ನೀವೂ ಟೀಕೆ ಮಾಡೋದಾ ಕೇಳಿದ್ದೀನಿ ನಾನು. ತಾಕತ್ತಿದ್ರೆ, ಅಪ್ಪನಿಗೆ ಹುಟ್ಟಿದ್ರೆ ಬಂದು ಎದುರಿಗೆ ನಿಂತು ಟೀಕೆ ಮಾಡ್ಲೀ’ ಎಂದು ಸವಾಲ್ ಹಾಕಿದ್ದಾರೆ.


 

‘ಎಳನೀರು ಮಾರುಕಟ್ಟೆ ಚರಿತ್ರೆ ನನಗೆ ಗೊತ್ತು. ಹಣ, ಮಜಾ ಮಾಡ್ಕೊಂಡು ಟೀಕೆ ಮಾಡ್ತಿರೇನ್ರೀ. ಅಂತಹವರು ಯಾರಾರು ಇದ್ರೆ ಮುಂದೆ ಬನ್ನಿ. ಕೋಟ್ಯಾಂತರ ರೂಪಾಯಿ ತಂದು ಅಭಿವೃದ್ಧಿ ಮಾಡಿದ್ದೀನಿ. ಯಾರಾದರೂ ತಾಕತ್ ಇದ್ರೆ ಮುಂದೆ ಬಂದು ಟೀಕೆ ಮಾಡ್ಲೀ. ಹಿಂದೆ ನಿಂತು ಮಾತಾಡೋದಲ್ಲ, ಬೈಟ್ ಕೊಡೋದಲ್ಲ ಎಂದು ಹೇಳಿದ್ದಾರೆ.


 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ