ಪ್ರಸ್ತುತ ವಿರೋಧ ಪಕ್ಷಗಳ ಎಲ್ಲಾ ನಾಯಕರು ವಿಧಾನಸಭೆಯಲ್ಲಿ ಸೇರಿದ್ದು, ಜೆಡಿಎಸ್ ಹಾಗೂ ಬಿಜೆಪಿ ಸದಸ್ಯರು ಒಟ್ಟಾಗಿ ಧರಣಿ ಆರಂಭಿಸಿದ್ದಾರೆ. ಅಲ್ಲದೆ ಪ್ರಕರಣವನ್ನು ಸಿಬಿಐ ತನಿಖೆಗೊಳಪಡಿಸಬೇಕೆಂದು ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದಿನ ಕಲಾಪವೂ ಕೂಡ ಸಗಮವಾಗಿ ನಡೆಯುವ ಲಕ್ಷಣಗಳು ಕಾಣುತ್ತಿಲ್ಲ.
ಇನ್ನು ಸಿಬಿಐ ತನಿಖೆಗೊಪ್ಪಸಬೇಕೆಂದು ಒತ್ತಾಯ ಪಡಿಸುತ್ತಿರುವ ವಿಧಾನಸಭಾ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್, ಸರ್ಕಾರವು ಈ ಪ್ರಕರಣದಲ್ಲಿ ರಾಜಕೀಯ ತಂತ್ರವನ್ನು ನಡೆಸುತ್ತಿದ್ದು, ಪ್ರಕರಣವನ್ನು ಮುಚ್ಚಿ ಹಾಕುವ ಯತ್ನದಲ್ಲಿದೆ. ಅಲ್ಲದೆ ಸಿಬಿಐಗೆ ವಹಿಸಿದಲ್ಲಿ ಅವರಿಗೆ ಪ್ರತಿಷ್ಠೆ ಹೋಗುವುದೇ ಎಂದು ಪ್ರಶ್ನಿಸಿದ್ದಾರೆ.
ಇನ್ನು ನಮ್ಮಲ್ಲಿಯೇ ದಕ್ಷ ತನಿಖಾಧಿಕಾರಿಗಳಿದ್ದು, ಸಿಐಡಿಯಿಂದ ತನಿಖೆ ನಡೆಸಲಿದ್ದೇವೆ. ಅದರಲ್ಲಿ ನಾವು ತಪ್ಪು ಅಥವಾ ಹಿನ್ನಡೆ ಕಂಡು ಬಂದಲ್ಲಿ ಸಿಬಿಐ ತನಿಖೆಗೊಳಪಡಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದರು. ಆದರೆ ಇದಕ್ಕೊಪ್ಪದ ವಿರೋಧ ಪಕ್ಷಗಳ ಸದಸ್ಯರು ಅಹೋರಾತ್ರಿ ವಿಧಾನಸಭೆಯಲ್ಲಿಯೇ ಧರಣಿಯನ್ನು ಹಮ್ಮಿಕೊಂಡಿದ್ದರು.