ಡಿ.ಕೆ.ಶಿವಕುಮಾರ್‌ರಿಂದ ಬಿಎಸ್‌ವೈ, ಶೋಭಾ ಕರಂದ್ಲಾಜೆ ರಕ್ಷಣೆ: ಕುಮಾರಸ್ವಾಮಿ

ಗುರುವಾರ, 13 ಏಪ್ರಿಲ್ 2017 (13:59 IST)
ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆಯನ್ನು ರಕ್ಷಿಸುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
 
ಶೋಭಾ ಕರಂದ್ಲಾಜೆ ಇಂಧನ ಖಾತೆ ಸಚಿವರಾಗಿದ್ದಾಗ ಇಂಧನ ಖರೀದಿಯಲ್ಲಿ 25 ಸಾವಿರ ಕೋಟಿ ರೂ ಹಗರಣ ನಡೆದಿದೆ. ಹಗರಣ ನಡೆದಿರುವ ಬಗ್ಗೆ ಸಚಿವ ಶಿವಕುಮಾರ್ ಸ್ವಂತ ಒಪ್ಪಿಕೊಂಡಿದ್ದಾರೆ ಎಂದು ಕಿಡಿಕಾರಿದರು. 
 
ಹಗರಣ ನಡೆದ ಬಗ್ಗೆ ದಾಖಲೆ ಕೊಡಿ ಎಂದರೆ ಯಡಿಯೂರಪ್ಪ, ಶೋಭಾ ಅವರನ್ನು ಜೈಲಿಗೆ ಕಳಿಸೋಕಾ ಎಂದು ಕೇಳ್ತಾರೆ. ಸಚಿವ ಡಿ.ಕೆ.ಶಿವಕುಮಾರ್ ಅಕ್ರಮವೆಸಗಿರುವುದು ಕಂಡು ಬಂದಿದೆ ಎಂದು ಆರೋಪಿಸಿದರು
 
ರಾಜ್ಯದಲ್ಲಿ 24 ಗಂಟೆ ವಿದ್ಯುತ್ ನೀಡುತ್ತಿದ್ದೀರಾ? ಪ್ರತಿ ಯುನಿಟ್‌ಗೆ 5 ರೂ.50 ಪೈಸೆಯಂತೆ ವಿದ್ಯುತ್ ಖರೀದಿ ಮಾಡಿದ್ದು ಯಾಕೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ