ಸಚಿವ ರಮಾನಾಥ್ ರೈ ವಿರುದ್ಧ ಗಂಭೀರ ಆರೋಪ ಮಾಡಿದ ಡಿವಿ ಸದಾನಂದ ಗೌಡ

ಶನಿವಾರ, 8 ಜುಲೈ 2017 (12:06 IST)
ತುಮಕೂರು: ದ.ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಂಸಾಚಾರಗಳಿಗೆ ರಾಜ್ಯದ ಸಚಿವ ಬಿ. ರಮಾನಾಥ್ ರೈ ಅವರ ಕುಮ್ಮಕ್ಕೇ ಕಾರಣ ಎಂದು ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಗಂಭೀರ ಆರೋಪ ಮಾಡಿದ್ದಾರೆ.


ರಾಜಕೀಯ ಲಾಭಗಳಿಗಾಗಿ ಸಚಿವರು ಕೋಮು ಗಲಭೆಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಆದರೆ ಬಿಜೆಪಿ ಮತ್ತು ಆರ್ ಎಸ್ಎಸ್ ಕಾರ್ಯಕರ್ತರು ಕಾನೂನು ಕೈಗೆತ್ತಿಕೊಳ್ಳುವುದಿಲ್ಲ. ಆದರೆ ರಕ್ಷಣೆ ಸಿಗದಿದ್ದರೆ, ನಮ್ಮನ್ನು ರಕ್ಷಿಸಿಕೊಳ್ಳುವ ತಾಕತ್ತು ನಮಗಿದೆ ಎಂದು ಸದಾನಂದ ಗೌಡರು ತುಮಕೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಈ ವಿಚಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತನಂತೆ ನಡೆದುಕೊಳ್ಳುವುದನ್ನು ಬಿಟ್ಟು, ರಾಜ್ಯದ ಮುಖ್ಯಮಂತ್ರಿಯಾಗಿ ಕೆಲಸ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೆ, ದ.ಕನ್ನಡ ಜಿಲ್ಲೆಯ ಶಾಂತಿ ಕದಡುವ ಕೃತ್ಯಗಳ ಬಗ್ಗೆ ಕೇಂದ್ರ ಗೃಹ ಇಲಾಖೆ ಗಮನಕ್ಕೆ ತರುವುದಾಗಿ ಕೇಂದ್ರ ಸಚಿವರು ಹೇಳಿದ್ದಾರೆ.

ಇದನ್ನೂ ಓದಿ.. ಸಿಬಿಐ ದಾಳಿಯ ದಾಳಕ್ಕೆ ಉರುಳಿದ ಬಿಹಾರದ ಮಿತ್ರರು

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ