ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ದಲಿತ ಮಹಿಳೆ ಸವಿತಾ ಅವರನ್ನು ವಿಧಾನಸೌಧಕ್ಕೆ ಕರೆತಂದು ಸುದ್ದಿಗೋಷ್ಠಿ ನಡೆಸಿ ರಾಜಕೀಯ ಮಾಡುತ್ತಿದ್ದಾರೆ ಎಂದು ಮಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದರು. ಈ ಕುರಿತು ಪ್ರತಿಕ್ರಿಯೆ ನೀಡಿದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ನಾವು ಎನೇ ಮಾಡಿದರು ಸಿಎಂ ಸಿದ್ದರಾಮಯ್ಯ ರಾಜಕೀಯ ಪ್ರೇರಿತ ಎಂದು ಹೇಳುತ್ತಾರೆ. ಇಂತಹ ಗಂಭೀರವಾದ ವಿಚಾರದಲ್ಲಿ ಯಾರು ರಾಜಕೀಯ ಮಾಡುವುದಿಲ್ಲ. ಈ ವಿಚಾರವನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಸಿದ್ದರಾಮಯ್ಯನವರಿಗೆ ತೀರುಗೇಟು ನೀಡಿದ್ದಾರೆ.