ದಲಿತ ಮಹಿಳೆಗೆ ಕಿರುಕುಳ: ಸಿಎಂ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಬುಧವಾರ, 25 ಮೇ 2016 (18:51 IST)
ಸಿಎಂ ಜನತಾದರ್ಶನದಲ್ಲಿ ದಲಿತ ಮಹಿಳೆಗೆ ಕಿರುಕುಳ ನೀಡಿರುವ ತಮ್ಮ ಕಛೇರಿಯ ಅಸಮರ್ಥ ಸಿಬ್ಬಂದಿಯನ್ನು ಒದ್ದು ಹೊರಗೆ ಹಾಕಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನಯರಿಗೆ ಜೆಡಿಎಸ್‌ ರಾಜ್ಯಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್‌.ಡಿ.ಕುಮಾರಸ್ವಾಮಿ, ಸಿಎಂ ಜನತಾದರ್ಶನದಲ್ಲಿ ದಲಿತ ಮಹಿಳೆಗೆ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಿರುಕುಳ ನೀಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳುವಂತೆ ಆಗ್ರಹಿಸಿದ್ದು, ಮುಖ್ಯಮಂತ್ರಿಯವರು ಮೊದಲು ತಮ್ಮ ಕಛೇರಿಯ ವ್ಯವಸ್ಥೆಯನ್ನು ಸರಿಪಡಿಸಿಕೊಳ್ಳಲಿ ಎಂದು ವಾಗ್ದಾಳಿ ನಡೆಸಿದ್ದಾರೆ.
 
ದಲಿತ ಮಹಿಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಗೆ ನ್ಯಾಯಕೊಡಿಸಲು ನೀಡಿದ ಗಡವು 2 ದಿನ ಬಾಕಿ ಉಳಿದಿದ್ದು, ಒಂದು ವೇಳೆ ದಲಿತ ಮಹಿಳೆಗೆ ಸರಕಾರ ನ್ಯಾಯ ಒದಗಿಸುವಲ್ಲಿ ವಿಫಲವಾದಲ್ಲಿ ಯಾವುದೇ ರೀತಿಯ ಹೋರಾಟಕ್ಕೂ ಸಿದ್ದ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಘೋಷಿಸಿದ್ದಾರೆ.  
 

ವೆಬ್ದುನಿಯಾವನ್ನು ಓದಿ