ದಯಾನಂದ ಸ್ವಾಮಿ ರಾಸಲೀಲೆ ಪ್ರಕರಣ: ಮನನೊಂದು ನಟಿ ಆತ್ಮಹತ್ಯೆಗೆ ಯತ್ನ?

ಗುರುವಾರ, 2 ನವೆಂಬರ್ 2017 (17:37 IST)
ಶಿವಮೊಗ್ಗ: ದಯಾನಂದ ಸ್ವಾಮಿ ಜತೆ ಹುಣಸಮಾರನಹಳ್ಳಿ ಮಠದಲ್ಲಿ ರಾಸಲೀಲೆ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ದಯಾನಂದ ಸ್ವಾಮಿ ರಾಸಲೀಲೆ ಪ್ರಕರಣ ಬೆಳಕಿಗೆ ಬಂದ ಬಳಿಕ ಜನ ಈ ಬಗ್ಗೆ ಜನ ಹೆಚ್ಚು ಪ್ರಶ್ನೆ ಕೇಳುತ್ತಿದ್ದರು. ಆದರೆ ಈ ಬಗ್ಗೆ ಆ ವಿಡಿಯೋದಲ್ಲಿರುವುದು ತಾನಲ್ಲ ಎಂದರೂ ಸಹ ಜನ ನಂಬುತ್ತಿಲ್ಲ. ಅಲ್ಲದೆ ಈ ಬಗ್ಗೆ ಮಾಧ್ಯಮಗಳಿಗೂ ಹೇಳಿಕೆ ನೀಡಿದ್ದರು. ಘಟನೆಯಿಂದ ತೀವ್ರ ಮನನೊಂದಿದ್ದ ನಟಿ ಮೂರು ದಿನದ ಹಿಂದೆ ಶಿವಮೊಗ್ಗದಲ್ಲಿ ನಟಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಸದ್ಯ ನಟಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎನ್ನಲಾಗಿದೆ. ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಠದ ಉತ್ತರಾಧಿಕಾರಿ ದಯಾನಂದ ಸ್ವಾಮಿ ವಿರುದ್ಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ