ಡಿಸಿ ರೋಹಿಣಿ ಸಿಂಧೂರಿಗೆ ಸಾರ್ವಜನಿಕರ ಬೆಂಬಲ
ರೋಹಿಣಿ ಸಿಂಧೂರಿ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸುತ್ತಿದ್ದಾರೆ. ಭೂ ಮಾಫಿಯಾ ಬಗ್ಗೆ ತನಿಖೆ ನಡೆಸಲು ಮುಂದಾಗಿದ್ದಕ್ಕೆ ಅವರ ಮೇಲೆ ಗೂಬೆ ಕೂರಿಸಿ ವರ್ಗಾವಣೆಗೆ ಈ ನಾಟಕ ಮಾಡಲಾಗುತ್ತಿದೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತ ವಿವಾದ ಉಪಶಮನ ಮಾಡಲು ಪ್ರಯತ್ನ ನಡೆಸಿದ ಸಚಿವ ಎಸ್ ಟಿ ಸೋಮಶೇಖರ್ ಕೂಡಾ ಇದು ನನ್ನ ವ್ಯಾಪ್ತಿ ಮೀರಿದೆ ಎಂದು ಅಸಹಾಯಕರಾಗಿ ಕೈ ಚೆಲ್ಲಿ ಕುಳಿತಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಶಿಲ್ಪಾ ನಾಗ್ ರಾಜೀನಾಮೆ ಅಂಗೀಕರಿಸಲ್ಲ ಎಂದಿದ್ದಾರೆ.