ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿಯವರ ಯೋಗಕ್ಷೇಮ ವಿಚಾರಿಸಿದ ಡಿಸಿಎಂ

ಶುಕ್ರವಾರ, 19 ಜುಲೈ 2019 (10:28 IST)
ಬೆಂಗಳೂರು : ಮೈತ್ರಿ ಸರ್ಕಾರ ವಿಶ್ವಾಸ ಮತಯಾಚನೆಗೆ ವಿಳಂಬ ಮಾಡುತ್ತಿರುವ ಹಿನ್ನಲೆಯಲ್ಲಿ  ಆಕ್ರೋಶಗೊಂಡ ಬಿಜೆಪಿ ನಾಯಕರು ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.



ಈ ಹಿನ್ನಲೆಯಲ್ಲಿ ಡಿಸಿಎಂ ಪರಮೇಶ್ವರ್ ಅವರು ಧರಣಿಯಲ್ಲಿ ನಿರತರಾದ ಬಿಜೆಪಿ ನಾಯಕರ  ಯೋಗಕ್ಷೇಮ ವಿಚಾರಿಸಿ ಅವರಿಗೆ ಊಟದ ವ್ಯವಸ್ಥೆ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

 

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಪರಮೇಶ್ವರ್ ಅವರು, ನಿನ್ನೆ ರಾತ್ರಿಯಿಂದ ವಿಪಕ್ಷ ನಾಯಕರು ವಿಧಾನಸೌಧದಲ್ಲಿ ತಂಗಿದ್ದಾರೆ. ವಿಪಕ್ಷದವರು ಪ್ರತಿಭಟನೆಯನ್ನ ಮಾಡ್ತಿದ್ದಾರೆ. ಬಿಜೆಪಿಯವರ ಯೋಗಕ್ಷೇಮವನ್ನು ನೋಡಿಕೊಳ‍್ಳುಬೇಕೆಂದು ಸ್ಪೀಕರ್ ಸೂಚಿಸಿದ್ರು. ನಾವು ಅವರಿಗಾಗಿ  ಭೋಜನ ವ್ಯವಸ್ಥೆ ಮಾಡಿದ್ವಿ. ಅವರಿಗೆ ಯಾವ ತೊಂದರೆಯಾಗಬಾರದು ಎಂದು ಹೇಳಿದ್ದೆ ಎಂಬುದಾಗಿ ತಿಳಿಸಿದ್ದಾರೆ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ