ಸಿಎಂ ಬಿಎಸ್ ಯಡಿಯೂರಪ್ಪರನ್ನು ಭೇಟಿಯಾದ ಡಿಸಿಎಂ ಲಕ್ಷ್ಮಣ್ ಸವದಿ

ಬುಧವಾರ, 29 ಜನವರಿ 2020 (11:08 IST)
ಬೆಂಗಳೂರು : ಫೆ.17ಕ್ಕೆ ವಿಧಾನ ಪರಿಷತ್ ನ 1 ಸ್ಥಾನಕ್ಕೆ ಬೈ ಎಲೆಕ್ಷನ್ ಇರುವ ಹಿನ್ನಲೆಯಲ್ಲಿ  ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಡಿಸಿಎಂ ಲಕ್ಷ್ಮಣ್ ಸವದಿ ಭೇಟಿಯಾಗಿದ್ದಾರೆ.

ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸಕ್ಕೆ  ಇಂದು ಭೇಟಿ ನೀಡಿದ ಡಿಸಿಎಂ ಲಕ್ಷ್ಮಣ್ ಸವದಿ ಖಾಲಿ ಇರುವ ಎಂಎಲ್ ಸಿ ಸ್ಥಾನ ತಮಗೆ ನೀಡುವಂತೆ ಸಿಎಂ ಬಳಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.

 

ಈಗಾಗಲೇ ಈ ಸ್ಥಾನಕ್ಕಾಗಿ ರಾಣಿಬೇನ್ನೂರಿನ ಮಾಜಿ ಶಾಸಕ ಆರ್.ಶಂಕರ್ ಪಟ್ಟು ಹಿಡಿದಿದ್ದು, ಆದಕಾರಣ ಈ ಸ್ಥಾನ ಯಾರ ಪಾಲಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ