ಜೆಡಿಎಸ್ ಜತೆ ಮೈತ್ರಿ ಇಲ್ಲ ಎಂದ ಡಿಸಿಎಂ ಪರಮೇಶ್ವರ್

ಶುಕ್ರವಾರ, 10 ಆಗಸ್ಟ್ 2018 (11:04 IST)
ಮಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜೆಡಿಎಸ್ ಜತೆ ಮೈತ್ರಿ ಇಲ್ಲ ಎಂದು ಡಿಸಿಎಂ ಜಿ ಪರಮೇಶ್ವರ್ ಹೇಳಿಕೆ ಕೊಟ್ಟಿದ್ದಾರೆ.
 

ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ಡಿಸಿಎಂ ಸ್ಥಳೀಯ ಸಂಸ್ಥೆಗಳಲ್ಲಿ ನಾವು ಮೈತ್ರಿ ಮಾಡಿಕೊಳ್ಳಲ್ಲ. ಈಗಾಗಲೇ ಕೆಪಿಸಿಸಿ ಅಧ್ಯಕ್ಷರೂ ಇದರ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಇನ್ನು ಜೆಡಿಎಸ್ ಜತೆ ಈ ಚುನಾವಣೆಗಳಲ್ಲಿ ಸಹಕಾರ ಕೊಡುವುದೂ ಅವರಿಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ.

ಇನ್ನು ರೈತರ ಸಾಲಮನ್ನಾ ಬಗ್ಗೆ ಸಮ್ಮಿಶ್ರ ಸರ್ಕಾರವನ್ನು ಟೀಕಿಸಿದ ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪಗೆ ತಿರುಗೇಟು ನೀಡಿರುವ ಪರಮೇಶ್ವರ್ ಕೇಂದ್ರ ಸರ್ಕಾರ ಅನುದಾನ ಕೊಟ್ಟಿದ್ದರೆ ನೀರಾವರಿ ಸೇರಿದಂತೆ ಇತರ ರೈತ ಉಪಯೋಗಿ ಕಾರ್ಯಕ್ರಮವನ್ನೂ ಮಾಡಬಹುದಿತ್ತು. ಆದರೆ ಪ್ರಧಾನಿ ಮೋದಿಗೆ ರೈತರ ಬಗ್ಗೆ ಕಾಳಜಿಯಿಲ್ಲ ಎಂದು ಟೀಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ