ತುಂಗಭದ್ರಾ ಡ್ಯಾಂನ ಪರಿಸ್ಥಿತಿ ಪರಶೀಲನೆಗೆ ಹೆಲಿಕಾಫ್ಟರ್ ಹತ್ತಿದ ಡಿಸಿಎಂ ಶಿವಕುಮಾರ್
ಡ್ಯಾಂಗೆ ಹಾನಿ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ತುಂಗಭದ್ರಾ ಕಾಡ ಅಧ್ಯಕ್ಷ ಹಸನ್ ಸಾಬ್ ದೋಟಿಹಾಳ, ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್ ಗೇಟ್ ಮುರಿದಿರುವುದರಿಂದ ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರು ನದಿಗೆ ಹರಿಯುತ್ತಿದೆ. ಇದರಿಂದ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಈಗಾಗಲೇ ಡ್ಯಾಮ್ ಗೇಟ್ ನೀಲನಕ್ಷೆ ನೀರಾವರಿ ಇಲಾಖೆಯ ಅಧಿಕಾರಿಗಳ ಬಳಿ ಇದ್ದು, ಅದರ ಪುನರ್ ನಿರ್ಮಾಣಕ್ಕೆ ಆದೇಶ ಮಾಡಲಾಗಿದೆ ಎಂದು ತಿಳಿಸಿದ್ದಾರೆ.