ಒಂದೇ ಕುಟುಂಬದ 9 ಜನರ ಸಾವು: ಕುಟುಂಬದವರಿಗೆ ಸಾಂತ್ವನ

ಬುಧವಾರ, 23 ಜನವರಿ 2019 (15:10 IST)
ಕಾರವಾರದ ಕೊರ್ಮಗಡದಲ್ಲಿ ನಡೆದ ದೋಣಿ ದುರಂತ ಪ್ರಕರಣದಲ್ಲಿ ಒಂದೇ ಕುಟುಂಬದ 9 ಜನರು ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಗಳಿಗೆ ಭೇಟಿ ನೀಡಿದ ಶಾಸಕ ಸಾಂತ್ವನ ಹೇಳಿದ್ದಾರೆ.  

ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಹೊಸೂರು ಗ್ರಾಮದ ಒಂದೇ ಕುಟುಂಬದ 9 ಜನರು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಕುಟುಂಬದ ಸದಸ್ಯರಿಗೆ ಶಾಸಕ ಬಸವರಾಜ ಬೊಮ್ಮಾಯಿ ಸಾಂತ್ವನ ಹೇಳಿದರು. ಬಸವರಾಜ ಬೊಮ್ಮಾಯಿ ಶಿಗ್ಗಾಂವ ಸವಣೂರು ಕ್ಷೇತ್ರದ ಶಾಸಕರಾಗಿದ್ದಾರೆ. ಕಾರವಾರದಲ್ಲಿ ನಡೆದ ಘಟನೆಯಲ್ಲಿ ಹಾವೇರಿಯ ಒಂದೇ ಕುಟುಂಬದ 9 ಜನರು ದೋಣಿ ದುರಂತದಲ್ಲಿ ಮೃತಪಟ್ಟಿದ್ದಾರೆ.


ಈಗಾಗಲೇ 7 ಜನರ ಮೃತ ದೇಹಗಳು ಪತ್ತೆಯಾಗಿದ್ದು ತಡ ರಾತ್ರಿ ಸಾಮೂಹಿಕ ಶವ ಸಂಸ್ಕಾರ ಮಾಡಲಾಗಿದೆ. ಇನ್ನೂ ಎರಡು ಮೃತ ದೇಹಗಳ ಪತ್ತೆ ಕಾರ್ಯ ನಡೆದಿದೆ. ಸರ್ಕಾರ ಈಗಾಗಲೇ ಮೃತರ ಕುಟುಂಬಕ್ಕೆ ಎರಡು ಲಕ್ಷ ಪರಿಹಾರ ಘೋಷಣೆ ಮಾಡಿದೆ. ಇದನ್ನು ಐದು ಲಕ್ಷಕ್ಕೆ ಏರಿಸಲು ಮುಖ್ಯಮಂತ್ರಿಗೆ ಮನವಿ ಮಾಡಿಕೊಂಡಿದ್ದೇನೆ. ಇದಕ್ಕೆ ಮುಖ್ಯಮಂತ್ರಿಗಳು ಸ್ಪಂದಿಸಿದ್ದಾರೆ ಎಂದರು.

ಘಟನೆಯಲ್ಲಿ ಬದುಕಿ ಬಂದ ಬಾಲಕ ಗಣೇಶ್ ನ  ಶಿಕ್ಷಣದ ಬಗ್ಗೆ ಸರ್ಕಾರದ ಜೊತೆ ಮಾತನಾಡುತ್ತೇನೆ. ಹಾವೇರಿ ಜಿಲ್ಲೆಯಲ್ಲಿಯೇ ಇದು ದೊಡ್ಡ ದುರಂತವಾಗಿದೆ. ದೇವರು ಕುಟುಂಬದ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು
ಶಿಗ್ಗಾಂವ ತಾಲೂಕಿನ ಹೊಸೂರಿನಲ್ಲಿ ಶಾಸಕ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ