ಸರ್ಕಾರದ ಆದೇಶದನ್ವಯ ಈ ಕಾರ್ಯಾಚರಣೆಯನ್ನು ಬೆಂಗಳೂರು ಜಿಲ್ಲಾ ಆರೋಗ್ಯ ಇಲಾಖೆಯ ಡಿಹೆಚ್ಒ ಡಾ.ರಜನಿ ಅವರ ನೇತೃತ್ವದಲ್ಲಿ ನಡೆಸಲಾಗಿದ್ದು, ಆರೋಗ್ಯಾಧಿಕಾರಿಗಳು ಸಂಸ್ಥೆಯ ಎಲ್ಲಾ ಶಾಖೆಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಈ ವೇಳೆ ನಗರದ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರೂ ಕೂಡ ಇದ್ದರು.
ಈ ಸಂಸ್ಥೆಯು ಬಂಜೆತನ ನಿವಾರಣೆ ಹೆಸರಿನಲ್ಲಿ ಸಾರ್ವಜನಿಕರನ್ನು ಸಾಕಷ್ಟು ವಂಚಿಸುತ್ತಿತ್ತು. ಅಲ್ಲದೆ ಈ ಸಂಬಂಧ ಮೋಸಕ್ಕೊಳಗಾಗಿದ್ದ 20 ಮಂದಿ ಸಾರ್ವಜನಿಕರು ಈ ಸಂಸ್ಥೆ ವಿರುದ್ಧ ದೂರು ದಾಖಲಿಸಿದ್ದರು. ಬಳಿಕ ಕರ್ನಾಟಕ ಮೆಡಿಕಲ್ ಕೌನ್ಸಿಲ್ ತನಿಖೆ ನಡೆಸಿತ್ತು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಈ ಹಿಂದೆಯೇ ಸಂಸ್ಥೆಯ ನೇತೃತ್ವ ವಹಿಸಿದ್ದ ಕೆ.ಟಿ ಗುರುಮೂರ್ತಿಯನ್ನು ಜೈಲಿಗೆ ಕಳುಹಿಸಲಾಗಿತ್ತು.