ACB ರದ್ದು ಆದೇಶವನ್ನ ಪ್ರಶ್ನಿಸಿ ಸುಪ್ರೀಂ ಮೇಲ್ಮನವಿ ಸಲ್ಲಿಸದಿರಲು ಸರ್ಕಾರ ನಿರ್ಧಾರ

ಮಂಗಳವಾರ, 23 ಆಗಸ್ಟ್ 2022 (18:25 IST)
ACB ರದ್ದು ಆದೇಶವನ್ನು ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ ವಿಚಾರ ಕುರಿತು ಕೋಲಾರದ ಕೆಜಿಎಫ್‌ನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ. ACB ರದ್ದು ಪ್ರಶ್ನಿಸಿ ಸರ್ಕಾರ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸುವುದಿಲ್ಲ. ಮೇಲ್ಮನವಿ ಸಲ್ಲಿಸದಿರಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿದ್ದಾಗಿದೆ. ಲೋಕಾಯುಕ್ತ ಬಲಪಡಿಸಲು BJP ಪ್ರಣಾಳಿಕೆಯಲ್ಲಿ ಘೋಷಣೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ACBರದ್ದು ಪ್ರಶ್ನಿಸಿ ಸುಪ್ರೀಂನಲ್ಲಿ ಪ್ರಶ್ನಿಸುವುದಿಲ್ಲ ಎಂದು ಕೋಲಾರದ ಕೆಜಿಎಫ್‌ನಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ