ಮೋದಿ ಕಾರ್ಯಕ್ರಮಕ್ಕೆ 2 ಲಕ್ಷ ಜನರನ್ನು ಸೇರಿಸಲು ನಿರ್ಧಾರ

ಸೋಮವಾರ, 17 ಅಕ್ಟೋಬರ್ 2022 (12:33 IST)
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಸುಮಾರು 2 ಲಕ್ಷ ಮಂದಿಯನ್ನು ಸೇರಿಸಲು ಕರ್ನಾಟಕ ಬಿಜೆಪಿ ನಿರ್ಧಾರ ತೆಗೆದುಕೊಂಡಿದೆ.

ನವೆಂಬರ್ 10 ರಂದು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಿರ್ಮಾಣಗೊಂಡಿರುವ 108 ಅಡಿ ಎತ್ತರದ ಕೇಂಪೇಗೌಡರ ಪ್ರತಿಮೆಯನ್ನು ಮತ್ತು ಎರಡನೇ ಟರ್ಮಿನಲ್ ಉದ್ಘಾಟನೆ ಮಾಡಲಿದ್ದಾರೆ. 

ಈ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಇಂದು ಪಕ್ಷದ ಕಚೇರಿಯಲ್ಲಿ ರಾಜ್ಯಾಧಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಬೆಂಗಳೂರಿನ ಶಾಸಕರ ಜೊತೆ ಪೂರ್ವಭಾವಿ ಸಿದ್ಧತೆಗಾಗಿ ಸಭೆ ನಡೆಸಲಾಯಿತು.

ಬೆಂಗಳೂರು ನಗರದಿಂದ 1 ಲಕ್ಷ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ 50 ಸಾವಿರ, ಚಿಕ್ಕಬಳ್ಳಾಪುರ ಹಾಗೂ ತುಮಕೂರಿನಿಂದ ತಲಾ 25 ಸಾವಿರ ಜನ ಸೇರಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ